ಕಯ್ಯಾರ ಕಿಞ್ಞಣ್ಣ ರೈ 
ಜಿಲ್ಲಾ ಸುದ್ದಿ

ಕೊನೆಗೂ ದೊರೆಯಲಿಲ್ಲ ಕರ್ನಾಟಕ ರತ್ನ ಗೌರವ

ಕಾಸರಗೋಡಿನ ಗಡಿನಾಡಿನಲ್ಲಿ ಕನ್ನಡಿಗರ ಸಾಂಸ್ಕೃತಿಕ ಪ್ರತಿನಿಧಿಯಾಗಿ ಕರ್ನಾಟಕದ ಬಹುತೇಕ ಮುಖ್ಯಮಂತ್ರಿಗಳನ್ನು...

ಮಂಗಳೂರು: ಕಾಸರಗೋಡಿನ ಗಡಿನಾಡಿನಲ್ಲಿ ಕನ್ನಡಿಗರ ಸಾಂಸ್ಕೃತಿಕ ಪ್ರತಿನಿಧಿಯಾಗಿ ಕರ್ನಾಟಕದ ಬಹುತೇಕ ಮುಖ್ಯಮಂತ್ರಿಗಳನ್ನು `ಕಾಸರಗೋಡು ಕರ್ನಾಟಕಕ್ಕೆ ಸೇರಬೇಕು, ಅದು ನನ್ನಬದುಕಿನ ಕೊನೆಯ ಆಸೆ' ಎಂದು ಆಗಾಗ ಒತ್ತಾಯಿಸುತ್ತಲೇ ಬಂದಿದ್ದ ಕಯ್ಯಾರರಿಗೆ ಕೊನೆಗೂ `ಕರ್ನಾಟಕ ರತ್ನ' ದೊರಕಲಿಲ್ಲ. 2014 ಜೂ. 8ರಂದು ಕಯ್ಯಾರರಿಗೆ
ನೂರು ತುಂಬಿ ಕಯ್ಯಾರರ ಶತಮಾನೋತ್ಸವದ ಆರಂಭವಾಗಿತ್ತು.ರಾಜ್ಯ ಸರಕಾರ ಅವರಿಗೆ ಈ ವಿಶೇಷ ಸಂದರ್ಭದಲ್ಲಾದರೂ ಹುಟ್ಟುಹಬ್ಬದ ಕೊಡುಗೆಯಾಗಿ `ಕರ್ನಾಟಕ ರತ್ನ' ನೀಡುವ ನಿರೀಕ್ಷೆ ಇತ್ತು. ಈ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್‍ನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಕರ್ನಾಟಕ ಸರ್ಕಾರವನ್ನು ಪದೇ ಪದೇ ವಿನಂತಿಸಿದ್ದರು. ಮಂಗಳೂರು ವಿವಯ  ಡಾಕ್ಟರ್ ಆಫ್ ಲಿಟರೇಚರ್ ಗೌರವ, ಶ್ರೇಷ್ಠ ಶಿಕ್ಷಕ ರಾಷ್ಟ್ರಪ್ರಶಸ್ತಿ, ಕರ್ನಾಟಕ  ಕಯ್ಯಾರರಿಗೆ ದೊರೆತಿದೆ.
ಪದ್ಯ, ಗದ್ಯ, ಸಾಹಿತ್ಯ ಸಂಸ್ಕೃತಿ ವಿಮರ್ಶೆ, ವ್ಯಾಕರಣ, ಶಿಶು ಸಾಹಿತ್ಯ, ನವೋದಯ ವಾಚನ ಮಾಲೆ, ತುಳು ಸಾಹಿತ್ಯ ಹೀಗೆ ಸಾಹಿತ್ಯ ಎಲ್ಲಾ ಪ್ರಕಾರಗಳಲ್ಲೂ ಹೆಸರು ಮಾಡಿರುವ ಕಯ್ಯಾರರ ಹಲವಾರು ನಾಟಕಗಳನ್ನೂ ರಚಿಸಿದ್ದಾರೆ. ಇವರ ಸಾಹಿತ್ಯ ಪ್ರಾಥಮಿಕದಿಂದ ವಿಶ್ವವಿದ್ಯಾಲಯವರೆಗೆ
ಪಠ್ಯಗಳಾಗಿದೆ.



ಕಯ್ಯಾರರ ಪ್ರಮುಖ ಕೃತಿಗಳು
 ಶ್ರೀಮುಖ, ಐಕ್ಯಗಾನ,
ಪುನರ್ನವ, ಚೇತನ,
ಕೊರಗ, ಶತಮಾನದ ಗಾನ,
ಗಂಧವತಿ, ಪ್ರತಿಭಾ
ಪಯಸ್ವಿನಿ
(ಕವನ ಸಂಕಲನಗಳು)
 ದುಡಿತವೆ ನನ್ನ ದೇವರು
(ಆತ್ಮಕಥನ)
 ಮಕ್ಕಳ ಪದ್ಯಮಂಜರಿ
(ಮಕ್ಕಳ ಕವನ ಸಂಕಲನ)
 ಸಾಹಿತ್ಯದೃಷ್ಟಿ
(ಲೇಖನ ಸಂಕಲನ)
 ವಿರಾಗಿಣಿ (ನಾಟಕ)
ಟಿ ಪರಶುರಾಮ
(ಕಥಾಸಂಕಲನ)
 ಪಂಚಮಿ, ಆಶಾನ್‍ರ
ಖಂಡಕಾವ್ಯಗಳು
(ಅನುವಾದ ಕೃತಿಗಳು)
 ಪರಿವು ಕಟ್ಟುಜಿ, ರಡ್ಡ್
ಕಣ್ಣ್‍ಡ್, ಸಾರೊ ಎಸಳ್ದ
ತಾಮರೆ, ಲೆಪ್ಪುನ್ರ್ಯೇ?,
ಬತ್ತನೊ ಈ ಬರ್ಪನೊ
(ತುಳು ಕವನ ಸಂಕಲನಗಳು)

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್‌ ಅಭಿಷೇಕ್​ ಸೇರಿ ಇಬ್ಬರು ಸಾವು; Video

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal flood: ಮೃತರ ಸಂಖ್ಯೆ 270ಕ್ಕೆ ಏರಿಕೆ, ಸುಮಾರು 288 ಭಾರತೀಯರು ನಾಪತ್ತೆ! 800ಕ್ಕೂ ಹೆಚ್ಚು ಜನರ ರಕ್ಷಣೆ