ಬನ್ನಂಜೆ ರಾಜ 
ಜಿಲ್ಲಾ ಸುದ್ದಿ

ಬಿಬಿಎಂಪಿ ಚುನಾವಣೆ: ಬನ್ನಂಜೆ ರಾಜನ ಕರೆತರುವಲ್ಲಿ ವಿಳಂಬ

ಉತ್ತರ ಆಫ್ರಿಕಾದ ಮೊರಕ್ಕೋದ ಜೈಲಿನಲ್ಲಿರುವ ಕುಖ್ಯಾತ ಭೂಗತ ಪಾತಕಿ ಬನ್ನಂಜೆ ರಾಜನನ್ನು ಭಾರತಕ್ಕೆ ಕರೆತರುವುದು ಸ್ವಲ್ಪ ವಿಳಂಬವಾಗುವ...

ಬೆಂಗಳೂರು: ಉತ್ತರ ಆಫ್ರಿಕಾದ ಮೊರಕ್ಕೋದ ಜೈಲಿನಲ್ಲಿರುವ ಕುಖ್ಯಾತ ಭೂಗತ ಪಾತಕಿ ಬನ್ನಂಜೆ ರಾಜನನ್ನು ಭಾರತಕ್ಕೆ ಕರೆತರುವುದು ಸ್ವಲ್ಪ ವಿಳಂಬವಾಗುವ ಸಾಧ್ಯತೆ ಇದೆ.

ಕಳೆದ ಶುಕ್ರವಾರವಷ್ಟೇ ಪತ್ರಿಕಾಗೋಷ್ಠಿ ನಡೆಸಿದ್ದ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಅವರು ಒಂದು ವಾರದಲ್ಲೇ ವಿಶೇಷ ತಂಡ ಮೊರಕ್ಕೋಗೆ ತೆರಳಿ ಬನ್ನಂಜೆ ರಾಜನನ್ನು ಭಾರತಕ್ಕೆ ತರಲಾಗುತ್ತದೆ ಎಂದು ಹೇಳಿದ್ದರು. ಹೀಗಾಗಿ, ಈ ವಾರದಲ್ಲೇ ನಗರ ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತ ಪ್ರತಾಪ ರೆಡ್ಡಿ ಅವರ ನೇತೃತ್ವದ ತಂಡ ಮೊರಕ್ಕೋಗೆ ತೆರಳಬೇಕಿತ್ತು.

ಆದರೆ, ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಅವರು ಮೊರಕ್ಕೋಗೆ ತೆರಳುವುದು ಸ್ವಲ್ಪ ವಿಳಂಬವಾಗುವ ಸಾಧ್ಯತೆ ಇದೆ. ಈ ಬಗ್ಗೆ ಮಾತನಾಡಿದ ರೆಡ್ಡಿ, ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಕಾನೂನು, ಸುವ್ಯವಸ್ಥೆ ಕರ್ತವ್ಯ ಇರುವ ಕಾರಣ ಕೆಲ ದಿನಗಳ ನಂತರ ಮೊರಕ್ಕೋಗೆ ತೆರಳಬಹುದು. ಎಷ್ಟು ದಿನಗಳು ವಿಳಂಬವಾಗುತ್ತದೆ ಎಂಬುದು ಖಚಿತವಾಗಿ ಹೇಳಲಾಗದು ಎಂದರು.

ರಾಜನ ಬಂಧನ ಹಾಗೂ ಆತನನ್ನು ಭಾರತಕ್ಕೆ ಕರೆತರುವ ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಅಲ್ಲದೇ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಮೊರಕ್ಕೋ ಸರ್ಕಾರ ಅಧಿಕೃತವಾಗಿ ಭಾರತ ಸರ್ಕಾರಕ್ಕೆ ಮಾಹಿತಿ ನೀಡಿದೆ. ಹೀಗಾಗಿ, ಇನ್ನೇನಿದ್ದರೂ ಆರೋಪಿಯನ್ನು ಕರೆತಂದು ದೇಶದಲ್ಲಿರುವ ಪ್ರಕರಣಗಳ ಬಗ್ಗೆ ವಿಚಾರಣೆ ನಡೆಸಲು ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT