ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಮಕ್ಕಳಿಬ್ಬರ ಕೊಂದು ತಾಯಿ ಆತ್ಮಹತ್ಯೆ

ರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ತಮ್ಮ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ...

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ತಮ್ಮ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಗರ ಹೊರವಲಯದಲ್ಲಿ ನಡೆದಿದೆ. ವರ್ತೂರಿನ ಸೂಲಿಕುಂಟೆಯಲ್ಲಿ ಈ ಘಟನೆ ಸಂಭವಿಸಿದೆ. ಆಶಾ (29) ಎಂಬುವರು ಆತ್ಮಹತ್ಯೆ ಮಾಡಿ ಕೊಂಡಿದ್ದು, ಇದಕ್ಕೂ ಮೊದಲು ಮಕ್ಕಳಾದ ಕೀರ್ತನಾ (10), ಲಕ್ಷ್ಮಿ (7) ನೇಣು ಬಿಗಿದು ಕೊಲೆ ಮಾಡಿದ್ದಾರೆ.

ಹೊಸೂರಿನ ದೇವಗೊಂಡನಹಳ್ಳಿಯ ಆಶಾ ಅವರಿಗೆ 12 ವರ್ಷದ ಹಿಂದೆ ಸೂಲಿಕುಂಟೆ ನಿವಾಸಿ ಕೃಷಿಕ ಶ್ರೀನಿವಾಸರೆಡ್ಡಿ ಅವರ ಜತೆ ವಿವಾಹವಾಗಿತ್ತು  ಗರ್ಭಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಆಶಾ, ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಗುಣವಾಗಿರಲಿಲ್ಲ. ಇದರಿಂದ ಖಿನ್ನತೆಗೆ ಒಳಗಾಗಿದ್ದರೆಂದು ಸಂಬಂಧಿಕರು ವಿಚಾರಣೆ ವೇಳೆ ಹೇಳಿಕೆ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಭಾನುವಾರ ಪತಿ ಶ್ರೀನಿವಾಸರೆಡ್ಡಿ ತೋಟಕ್ಕೆ ಹೋಗಿದ್ದರು. ಮಧ್ಯಾಹ್ನ 3 ಗಂಟೆಗೆ ಪತಿ ಶ್ರೀನಿವಾಸರೆಡ್ಡಿ ಮನೆಗೆ ವಾಪಸಾದಾಗ ಒಳಗಿನಿಂದ ಚಿಲಕ ಹಾಕಿತ್ತು. ಹಲವು ಬಾರಿ ಬಾಗಿಲು ಬಡಿದರೂ ಪ್ರತಿಕ್ರಿಯೆ ಬಂದಿಲ್ಲ. ಕೊನೆಗೆ ಕಿಟಕಿಯಿಂದ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ಗರ್ಭಕೋಶ ಸಮಸ್ಯೆಯಿಂದಾಗಿ ಜೀವನದ ಮೇಲೆ ಜಿಗುಪ್ಸೆಯಾಗಿದೆ. ನಾನು ಸತ್ತ ನಂತರ ನನ್ನ ಮಕ್ಕಳು ಅನಾಥರಾಗುತ್ತಾರೆ. ತಾಯಿ ಮೃತಪಟ್ಟ ಬಳಿಕ ನಾನು ಅನುಭವಿಸಿದ ಕಷ್ಟ ನನ್ನ ಮಕ್ಕಳಿಗೆ ಬರಬಾರದೆಂಬ ಕಾರಣಕ್ಕೆ ಅವರನ್ನೂ ನನ್ನ ಜತೆಯಲ್ಲೆ ಕರೆದೊ ತ್ತಿದ್ದೇನೆ ಎಂದು ಆಶಾ ಮರಣ ಪತ್ರ ಬರೆದಿಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT