ಸಿಬಿಐ 
ಜಿಲ್ಲಾ ಸುದ್ದಿ

ಅಕ್ರಮ ಲಾಟರಿ ದಂಧೆ ಸಿಬಿಐನಿಂದ ಎಫ್ಐಆರ್

ರಾಜ್ಯದ ಪೊಲೀಸ್ ಇಲಾಖೆ ಇತಿಹಾಸದಲ್ಲಿ ಮೊದಲ ಬಾರಿಗೆ ಹಿರಿಯ ಐಪಿಎಸ್ ಅಧಿಕಾರಿ ಅಮಾನತಾಗಲು ಕಾರಣವಾದ ಅಕ್ರಮ ಲಾಟರಿ ದಂಧೆ...

ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆ ಇತಿಹಾಸದಲ್ಲಿ ಮೊದಲ ಬಾರಿಗೆ ಹಿರಿಯ ಐಪಿಎಸ್ ಅಧಿಕಾರಿ ಅಮಾನತಾಗಲು ಕಾರಣವಾದ ಅಕ್ರಮ ಲಾಟರಿ ದಂಧೆ
ಪ್ರಕರಣ ಸಂಬಂಧ ಕೇಂದ್ರ ತನಿಖಾ ದಳ(ಸಿಬಿಐ) ಅಧಿಕಾರಿಗಳು ಮಂಗಳವಾರ ಎಫ್ಐಆರ್ ದಾಖಲಿಸಿದ್ದಾರೆ. ರಾಜ್ಯದಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿದ್ದ ಲಾಟರಿ ಪ್ರಕರಣದ ತನಿಖೆಯನ್ನು ವಿರೋಧ ಪಕ್ಷಗಳು ಹಾಗೂ ಸಾರ್ವಜನಿಕರ ಒತ್ತಾಯದ ಮೇರೆಗೆ ರಾಜ್ಯ ಸರ್ಕಾರ ಪ್ರಕರಣ ವನ್ನು ಮೇ 26ರಂದು ಸಿಬಿಐಗೆ ವರ್ಗಾಯಿಸಿತ್ತು. ಐಪಿಸಿ ಕಲಂ 120 ಬಿ,(ಅಪರಾ ಧಿಕ ಉದ್ದೇಶ), 188(ಸರ್ಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿಪಡಿಸುವುದು), 420 (ವಂಚನೆ) ಮತ್ತು 34(ಹಲವು ಮಂದಿ ಸೇರಿ ಸಮಾನ ಉದ್ದೇಶದ ಕೃತ್ಯ) ಲಾಟರಿ ನಿಷೇಧ ಕಾಯ್ದೆ ಕಲಂ 5 ಮತ್ತು 7 ಅನ್ವಯ ಲಾಟರಿ ದಂಧೆ ನಡೆಸುತ್ತಿದ್ದವರು ಹಾಗೂ ಇತರ ವ್ಯಕ್ತಿಗಳ ವಿರುದ್ಧ ಸಿಬಿಐ ಎಫ್ ಐಆರ್ ದಾಖಲಿಸಿಕೊಂಡಿದೆ. ಹಗರಣದ ಬಗ್ಗೆ ಕೋಲಾರದ ಕೆಜಿಎಫ್  ನ ರಾಜ್ಯ ಅಬಕಾರಿ ಮತ್ತು ಲಾಟರಿ ನಿರ್ದೇಶನಾಲಯ ಘಟಕದಲ್ಲಿ ಎಫ್ ಐಆರ್ ದಾಖಲಾಗಿತ್ತು. ಈ ಸಂಬಂಧ ಕೋಲಾರ ಲಾಟರಿ ನಿಷೇಧ ದಳದ ಅಧಿಕಾರಿಗಳು ಕಿಂಗ್ ಪಿನ್ ಎನ್ನಲಾದ ಪಾರಿರಾಜನ್‍ನನ್ನು ಬಂಧಿಸಿದ್ದರು. ಸದ್ಯ ಆರೋಪಿ ನ್ಯಾಯಾಂಗದ ವಶದಲ್ಲಿದ್ದಾನೆ.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

SCROLL FOR NEXT