ಸಿಬಿಐ 
ಜಿಲ್ಲಾ ಸುದ್ದಿ

ಅಕ್ರಮ ಲಾಟರಿ ದಂಧೆ ಸಿಬಿಐನಿಂದ ಎಫ್ಐಆರ್

ರಾಜ್ಯದ ಪೊಲೀಸ್ ಇಲಾಖೆ ಇತಿಹಾಸದಲ್ಲಿ ಮೊದಲ ಬಾರಿಗೆ ಹಿರಿಯ ಐಪಿಎಸ್ ಅಧಿಕಾರಿ ಅಮಾನತಾಗಲು ಕಾರಣವಾದ ಅಕ್ರಮ ಲಾಟರಿ ದಂಧೆ...

ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆ ಇತಿಹಾಸದಲ್ಲಿ ಮೊದಲ ಬಾರಿಗೆ ಹಿರಿಯ ಐಪಿಎಸ್ ಅಧಿಕಾರಿ ಅಮಾನತಾಗಲು ಕಾರಣವಾದ ಅಕ್ರಮ ಲಾಟರಿ ದಂಧೆ
ಪ್ರಕರಣ ಸಂಬಂಧ ಕೇಂದ್ರ ತನಿಖಾ ದಳ(ಸಿಬಿಐ) ಅಧಿಕಾರಿಗಳು ಮಂಗಳವಾರ ಎಫ್ಐಆರ್ ದಾಖಲಿಸಿದ್ದಾರೆ. ರಾಜ್ಯದಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿದ್ದ ಲಾಟರಿ ಪ್ರಕರಣದ ತನಿಖೆಯನ್ನು ವಿರೋಧ ಪಕ್ಷಗಳು ಹಾಗೂ ಸಾರ್ವಜನಿಕರ ಒತ್ತಾಯದ ಮೇರೆಗೆ ರಾಜ್ಯ ಸರ್ಕಾರ ಪ್ರಕರಣ ವನ್ನು ಮೇ 26ರಂದು ಸಿಬಿಐಗೆ ವರ್ಗಾಯಿಸಿತ್ತು. ಐಪಿಸಿ ಕಲಂ 120 ಬಿ,(ಅಪರಾ ಧಿಕ ಉದ್ದೇಶ), 188(ಸರ್ಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿಪಡಿಸುವುದು), 420 (ವಂಚನೆ) ಮತ್ತು 34(ಹಲವು ಮಂದಿ ಸೇರಿ ಸಮಾನ ಉದ್ದೇಶದ ಕೃತ್ಯ) ಲಾಟರಿ ನಿಷೇಧ ಕಾಯ್ದೆ ಕಲಂ 5 ಮತ್ತು 7 ಅನ್ವಯ ಲಾಟರಿ ದಂಧೆ ನಡೆಸುತ್ತಿದ್ದವರು ಹಾಗೂ ಇತರ ವ್ಯಕ್ತಿಗಳ ವಿರುದ್ಧ ಸಿಬಿಐ ಎಫ್ ಐಆರ್ ದಾಖಲಿಸಿಕೊಂಡಿದೆ. ಹಗರಣದ ಬಗ್ಗೆ ಕೋಲಾರದ ಕೆಜಿಎಫ್  ನ ರಾಜ್ಯ ಅಬಕಾರಿ ಮತ್ತು ಲಾಟರಿ ನಿರ್ದೇಶನಾಲಯ ಘಟಕದಲ್ಲಿ ಎಫ್ ಐಆರ್ ದಾಖಲಾಗಿತ್ತು. ಈ ಸಂಬಂಧ ಕೋಲಾರ ಲಾಟರಿ ನಿಷೇಧ ದಳದ ಅಧಿಕಾರಿಗಳು ಕಿಂಗ್ ಪಿನ್ ಎನ್ನಲಾದ ಪಾರಿರಾಜನ್‍ನನ್ನು ಬಂಧಿಸಿದ್ದರು. ಸದ್ಯ ಆರೋಪಿ ನ್ಯಾಯಾಂಗದ ವಶದಲ್ಲಿದ್ದಾನೆ.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT