ಜಗದೀಶ್ ಶೆಟ್ಟರ್ 
ಜಿಲ್ಲಾ ಸುದ್ದಿ

ಕಳಸಾ-ಬಂಡೂರಿ ನಿರ್ಲಕ್ಷ್ಯ:ಮಾಜಿ ಸಿಎಂ ಶೆಟ್ಟರ್ ಆರೋಪ

ಧಾರವಾಡ: ಮಹದಾಯಿ ನ್ಯಾಯಾಧೀಕರಣಕ್ಕೆ ಮಧ್ಯಂತರ ಅರ್ಜಿ ಸಲ್ಲಿಸಿ, 7.56 ಟಿಎಂಸಿ ನೀರಿಗಾಗಿ ಪಟ್ಟು ಹಿಡಿದರೆ ನಮ್ಮ ಪರವಾಗಿ ತೀರ್ಪು ಬರುತ್ತದೆ. ಮಹದಾಯಿ ನದಿ ಕುರಿತು ಪ್ರತ್ಯೇಕವಾಗಿ ಸರ್ವ ಪಕ್ಷಗಳ ನಿಯೋಗ ಪ್ರಧಾನಿ ಭೇಟಿ ಮಾಡಿದರೆ ಮಾತ್ರ ಈ ಸಮಸ್ಯೆಗೆ ಪರಿಹಾರ ಸಿಗಬಹುದು. ಅದು ಬಿಟ್ಟು ಆರೇಳು ಸಮಸ್ಯೆಗಳೊಂದಿಗೆ ಮಹದಾಯಿಯನ್ನೂ ಪ್ರಸ್ತಾಪಿಸಿದರೆ ಸಮಸ್ಯೆ ಪರಿಹಾರವಾಗದು. ಯೋಜನೆಯ ರೂಪುರೇಷೆಯೇ ಇಲ್ಲದೆ ಮೇಕೆದಾಟು ಯೋಜನೆಗೆ ನಿಂಯೋಗ ಒಯ್ಯುವ ಸಿದ್ದರಾಮಯ್ಯಗೆ ಹತ್ತಾರು ದಶಕಗಳ ಮಹದಾಯಿ ಕೂಗಿಗೆ ಕಿವಿಗೊಡುವ ಸೌಜನ್ಯ ತೋರುತ್ತಿಲ್ಲ ಎಂದು ಲೇವಡಿ ಮಾಡಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ಯಡಿಯೂರಪ್ಪ  100 ಕೋಟಿ ಮಂಜೂರು ಮಾಡಿ ಕಳಸಾ- ಬಂಡೂರಿ ನಾಲಾ ಜೋಡಣೆಗೆ ಚಾಲನೆ ನೀಡಿದ್ದರು. ನರಗುಂದ ಹಾಗೂ ನವಲಗುಂದದಲ್ಲಿ ಮಹದಾಯಿ ನದಿ ಜೋಡಣೆ ಕುರಿತು ರೈತರು ಹಲವು ದಿನಗಳಿಂದ ರಸ್ತೆ ತಡೆ ನಡೆಸಿ, ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತಿದ್ದರೂ ಅಲ್ಲಿಗೆ ತೆರಳಿ ರೈತರಿಗೆ ಧೈರ್ಯ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ ಎಂದು ಶೆಟ್ಟರ್ ಆಪಾದಿಸಿದರು.

ತಲಾ 10 ಲಕ್ಷ ನೀಡಲು ಒತ್ತಾಯ
 ರಾಜ್ಯದ 110 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿ, ಪ್ರತಿ ಹೆಕ್ಟೇರ್ ಭೂಮಿಗೆ ರೂ. 50 ಸಾವಿರ ಪರಿಹಾರ ನೀಡಬೇಕು. ರೈತರ ರೂ. 2 ಲಕ್ಷವರರೆಗಿನ ಸಾಲ ಮನ್ನಾ ಮಾಡಬೇಕು. ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ 250ಕ್ಕೂ ಹೆಚ್ಚು ರೈತರ ಕುಟುಂಬಗಳಿಗೆ ತಲಾ ರೂ. 10 ಲಕ್ಷ ಪರಿಹಾರ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮನವಿ ಮಾಡಿದರು.

ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ತಾಲೂಕಿನ ಅಮ್ಮಿನಬಾವಿ ಯಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ನಡೆಸಿದ ಪಾದಯಾತ್ರೆಯಲ್ಲಿ ಅವರು ಮಾತನಾಡಿದರು. ಸಿದ್ದರಾಮಯ್ಯ ಜನರ ಸೇವೆ ಮಾಡಲಲ್ಲ, ಶೋಕಿಗಾಗಿ ಮುಖ್ಯಮಂತ್ರಿಯಾದವರು. ಅವರಿಗೆ ರೈತರ ಗೋಳು ಅರ್ಥವಾಗುತ್ತಿಲ್ಲ. ನಾನು ಕೇವಲ 10 ತಿಂಗಳು ಮುಖ್ಯಮಂತ್ರಿಯಿದ್ದ ಸಂದರ್ಭದಲ್ಲಿ ರಾಜ್ಯದ ರೈತರ ಸಂಕಷ್ಟ ಅರ್ಥ ಮಾಡಿಕೊಂಡು  ರೂ.3600 ಕೋಟಿ ಸಾಲ ಮನ್ನಾ ಮಾಡಿದ್ದೇನೆ. ಆದರೆ, ಸಿದ್ದರಾಮಯ್ಯ ರೈತರ ಕುಟುಂಬಕ್ಕೆ ಸಾಂತ್ವನ ಹೇಳುವ ಸೌಜನ್ಯವನ್ನೂ ತೋರಿಸುತ್ತಿಲ್ಲ. ರೈತರ ಆಕ್ರೋಶ ರಸ್ತೆಗಿಳಿಯುತ್ತಿದ್ದಂತೆ ಎಚ್ಚೆತ್ತುಕೊಂಡು ಒಂದೆರಡು ಕಡೆ ಭೇಟಿ ನೀಡಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದಾಗಿನಿಂದಲೂ ಅಧಿಕಾರಿ ವರ್ಗ ಸರಿಯಾಗಿ ಕೆಲಸ ಮಾಡುತ್ತಿಲ್ಲ. ರೈತರಿಗೆ ವಿಮೆಯಲ್ಲೂ ಮೋಸವಾಗುತ್ತಿದೆ. ಕೃಷಿ ಹಾಗೂ ತೋಟಗಾರಿಕೆ ಅಧಿಕಾರಿಗಳಿಂದ ಸರಿಯಾದ ಮೌಲ್ಯಮಾಪನ ನಡೆದಿಲ್ಲ. ಪ್ರತಿ ಗ್ರಾಪಂಗೆ ಮಳೆಮಾಪನ ಕೇಂದ್ರ ಅಳವಡಿಸಿ ಎಂದು ಹಲವು ಬಾರಿ ಮನವಿ ಮಾಡಿದರೂ ಸರ್ಕಾರ ಎಚ್ಚೆತ್ತುಕೊಳ್ಳುತ್ತಿಲ್ಲ. ವಿಮಾ ಕಂಪನಿಯೊಂದಿಗೆ ಸರ್ಕಾರವೇ ಸೇರಿ ರೈತರ ದುಡ್ಡನ್ನು ಕೊಳ್ಳೆ ಹೊಡೆದಿದೆ ಎಂದು ಆರೋಪಿಸಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT