ಕೃಷ್ಣ ಭೈರೇಗೌಡ 
ಜಿಲ್ಲಾ ಸುದ್ದಿ

ಬಿಪಿಎಲ್ ಕುಟುಂಬಕ್ಕೆ ಸೊಸೈಟಿ ಸದಸ್ಯತ್ವ

ಸಹಕಾರಿ ಸಂಘಗಳ ಮೂಲಕವೇ ರೈತರಿಗೆ ಸಾಲ ದೊರೆಯುವಂತೆ ಮಾಡಲು ಬಿಪಿಎಲ್ ಕುಟುಂಬಗಳಿಗೆ ಸರ್ಕಾರವೇ ಶುಲ್ಕ ಭರಿಸಿ ಸದಸ್ಯತ್ವ ನೀಡಲು ಕ್ರಮ ಕೈಗೊಳ್ಳಲಾಗಿದೆ

ಹಾವೇರಿ: ಸಹಕಾರಿ ಸಂಘಗಳ ಮೂಲಕವೇ ರೈತರಿಗೆ ಸಾಲ ದೊರೆಯುವಂತೆ ಮಾಡಲು ಬಿಪಿಎಲ್ ಕುಟುಂಬಗಳಿಗೆ ಸರ್ಕಾರವೇ ಶುಲ್ಕ ಭರಿಸಿ ಸದಸ್ಯತ್ವ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಸಚಿವ ಕೃಷ್ಣ ಭೈರೇಗೌಡ  ತಿಳಿಸಿದರು.

ಖಾಸಗಿ ಲೇವಾದೇವಿದಾರರ ಕಪಿಮುಷ್ಠಿಯಿಂದ ರೈತರನ್ನು ಮುಕ್ತಗೊಳಿಸಿ ಸಹಕಾರಿ ಸಂಘಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ಬೆಳೆ ಸಾಲ ಸಿಗುವಂತೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ. ಮೂರು ವರ್ಷಗಳ ಅವಧಿಯಲ್ಲಿ ಬಿಪಿಎಲ್ ಕುಟುಂಬದ ಎಲ್ಲಾ ರೈತರಿಗೆ ಸಹಕಾರಿ ಸಂಘಗಳ ಸದಸ್ಯತ್ವ ನೀಡಲಾಗುವುದು. ಸದಸ್ಯತ್ವ ಶುಲ್ಕವನ್ನು ಸರ್ಕಾರವೇ ಭರಿಸಲಿದೆ ಎಂದರು.

ಮಳೆ ಕೊರತೆಯಿಂದ ರಾಜ್ಯದಲ್ಲಿ 44 .75 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ 10 ಲಕ್ಷ ಹೆಕ್ಟೇರ್ ಕಡಿಮೆಯಾಗಿದೆ. ಬಿತ್ತನೆಯಾದ ಬಳಿಕ ಮಳೆಯಾಗದೇ 12 ರಿಂದ 15 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಲೆ ಒಣಗುತ್ತಿದೆ. ಪರ್ಯಾಯ ಬೆಳೆ ಹಾಗು ಬಿತ್ತನೆ ತಳಿ ಬೀಜವನ್ನು ರೈತರಿಗೆ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಆದರೂ ಈ ಸಲ ಆಹಾರ ಉತ್ಪಾದನೆಯಲ್ಲಿ ಗುರಿ ತಲುಪುವ ಪರಿಸ್ಥಿತಿ ಕಂಡುಬರುತ್ತಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಹೋರಾಟ ನಡೆಸುತ್ತೇವೆಂದ ಸಿಎಂ ಸಿದ್ದರಾಮಯ್ಯ

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

SCROLL FOR NEXT