ಲಾಲ್ ಬಾಗ್ ನಲ್ಲಿ ಜೇನು ಕಚ್ಚಿ ಬಾಲಕಿ ಸಾವು (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಲಾಲ್ ಬಾಗ್ ನಲ್ಲಿ ಜೇನು ಕಚ್ಚಿ ಬಾಲಕಿ ಸಾವು

ಲಾಲ್‍ಬಾಗ್‍ನಲ್ಲಿ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಹೋಗಿದ್ದಾಗ ಜೇನು ಹುಳು ಕಡಿತದಿಂದ ಗಂಭೀರವಾಗಿ ಗಾಯಗೊಂಡಿದ್ದ 7 ವರ್ಷದ ಬಾಲಕಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ...

ಬೆಂಗಳೂರು: ಲಾಲ್‍ಬಾಗ್‍ನಲ್ಲಿ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಹೋಗಿದ್ದಾಗ ಜೇನು ಹುಳು ಕಡಿತದಿಂದ ಗಂಭೀರವಾಗಿ ಗಾಯಗೊಂಡಿದ್ದ 7 ವರ್ಷದ ಬಾಲಕಿ ಚಿಕಿತ್ಸೆ ಫಲಿಸದೆ
ಮೃತಪಟ್ಟಿದ್ದಾಳೆ.

ಪದ್ಮನಾಭನಗರ ಗುರುಪ್ರಸಾದ್ ಹಾಗೂ ಸುಗುಣ ದಂಪತಿ ಪುತ್ರಿ ವೈಷ್ಣವಿ ಮೃತ ಬಾಲಕಿ. ಆ.15ರಂದು ಪಾಲಕರೊಂದಿಗೆ ಲಾಲ್‍ಬಾಗ್‍ಗೆ ಆಗಮಿಸಿದ್ದಾಗ ಜೇನು ಹುಳುಗಳು ಕಚ್ಚಿದ್ದವು.
ತಂದೆ ತಾಯಿ ಜತೆ ಲಾಲ್‍ಬಾಗ್ ಫಲಪುಷ್ಪ ವೀಕ್ಷಣೆಗೆ ತೆರಳಿದ್ದಳು. ಮಧ್ಯಾಹ್ನ 12 ಕ್ಕೆ ತಂದೆ ಜತೆ ಕಡಿಮೆ ಜನ ದಟ್ಟಣೆ ಇರುವ ಕೆಂಪೇಗೌಡ ಟವರ್ ಬಳಿ ತೆರಳಿದ್ದಳು. ಮರದ ಬಳಿ ಆಟವಾಡುತ್ತಿ ದ್ದಾಗ ಏಕಾಏಕಿ ಜೋರಾಗಿ ಕಿರುಚಲು ಆರಂಬಿsಸಿದ್ದಳು. ಏನಾಯಿತು ಎಂದು ತಂದೆ ಗುರುಪ್ರಸಾದ್ ನೋಡಿದಾಗ ಗುಂಪಾಗಿ ಹೆಜ್ಜೇನುಗಳು ವೈಷ್ಣವಿ ಮೇಲೆ ದಾಳಿ ನಡೆಸಿದ್ದವು.

ಜೇನು ದಾಳಿಯಿಂದ ರಕ್ಷಿಸಲು ಯತ್ನಿಸಿದಾಗ ಗುರುಪ್ರಸಾದ್ ಅವರ ಮೇಲೂ ಜೇನು ಹುಳುಗಳು ದಾಳಿ ಮಾಡಿವೆ. ಸ್ವಲ್ಪ ದೂರದಲ್ಲಿದ್ದ ಪತ್ನಿ ಸುಗುಣ ಸಹಾಯಕ್ಕೆ ಸಾರ್ವಜನಿಕರ ಬಳಿ ಮೊರೆ ಇಟ್ಟಿದ್ದಾರೆ. ಈ ವೇಳೆ ನೆರವಿಗೆ ಧಾವಿಸಿದ ಸ್ಥಳೀಯರು ಜೇನು ಹುಳುಗಳನ್ನು ಓಡಿಸಿದರು. ಬಳಿಕ ಗಾಯಗೊಂಡಿದ್ದ ಇಬ್ಬರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಜೇನು ಕಚ್ಚಿದ್ದರಿಂದ ಗಂಭೀರ ಗಾಯವಾಗಿದ್ದ ವೈಷ್ಣವಿಯನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಅದೇ ದಿನವೇ ಹೆಚ್ಚು ಹುಳುಗಳು ಕಚ್ಚಿದ್ದ ಕಾರಣ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಿದ್ದರು. ಚಿಕಿತ್ಸೆ ಫಲಿಸದೆ ಗುರುವಾರ ಸಂಜೆ ವೈಷ್ಣವಿ ಮೃತಪಟ್ಟಿದ್ದಾಳೆ ಎಂದು ಸಿದ್ದಾಪುರ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT