ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಅನಾಥಶ್ರಮದ ಮುಖ್ಯಸ್ಥನಿಂದಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಸೋಲದೇವನಹಳ್ಳಿ ಚಿಕ್ಕಸಂದ್ರದಲ್ಲಿರುವ ಅನಾಥಶ್ರಮದಲ್ಲಿದ್ದ 12 ವರ್ಷದ ಬಾಲಕಿ ಮೇಲೆ ಮುಖ್ಯಸ್ಥನೇ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣ...

ಬೆಂಗಳೂರು: ಸೋಲದೇವನಹಳ್ಳಿ ಚಿಕ್ಕಸಂದ್ರದಲ್ಲಿರುವ ಅನಾಥಶ್ರಮದಲ್ಲಿದ್ದ 12 ವರ್ಷದ ಬಾಲಕಿ ಮೇಲೆ ಮುಖ್ಯಸ್ಥನೇ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಈ ಸಂಬಂಧ ಆರೋಪಿ ವಿಜಯ್ ರಾಜ್(30) ಎಂಬಾತನನ್ನು ಬುಧವಾರ ಬಂಧಿಸಲಾಗಿದೆ. ಖಾಸಗಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ ಬಾಲಕಿಯ ತಾಯಿ ದಿನಗೂಲಿ ಕೆಲಸ ಮಾಡುತ್ತಿದ್ದಾರೆ. ಆದರೆ, ಅವರಿಗೆ ಮಗಳಿಗೆ ಶಿಕ್ಷಣ ಕೊಡಿಸಲು ಸಾಧ್ಯವಾಗದ ಕಾರಣ ಅನಾಥಶ್ರಮಕ್ಕೆ ಕಳುಹಿಸಿದ್ದರು. ಬುಧವಾರ ಮಧ್ಯಾಹ್ನ ಬಾಲಕಿ ಚಿಕ್ಕಸಂದ್ರದ ರಸ್ತೆಯೊಂದರಲ್ಲಿ ಅಳುತ್ತಾ ನಿಂತಿದ್ದಳು.

ಬಾಲಕಿಯನ್ನು ಗಮನಿಸಿದ ವೃದ್ಧೆಯೊಬ್ಬರು ವಿಚಾರಿಸಿದಾಗ, ಅನಾಥಾಶ್ರಮದ ಮುಖ್ಯಸ್ಥ ವಿಜಯ್ ರಾಜ್ ಎಂಬಾತ ಎರಡು ತಿಂಗಳಿಂದ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ. ಹೀಗಾಗಿ ಪರಾರಿಯಾಗಿದ್ದಾಗಿ ಹೇಳಿದ್ದಳು. ಆರೋಪಿ ವಿರುದ್ಧ ಪೊಕ್ಸೋ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿ ತನಿಖೆ ನೆಡಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT