ಹಲ್ಲೆಗೊಳಗಾಗಿರುವ ಪೀಣ್ಯ ಕೈಗಾರಿಕಾ ಪ್ರದೇಶದ ಜೆಡಿಎಸ್ ಅಭ್ಯರ್ಥಿ ಸಂಬಂಧಿ ಗೋಪಾಲ್. 
ಜಿಲ್ಲಾ ಸುದ್ದಿ

ಬಿಬಿಎಂಪಿ ಚುನಾವಣೆ: ಸೀರೆ ಹಂಚಿದ್ದಕ್ಕೆ ಮಾರಾಮಾರಿ

ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಸೀರೆ ಹಂಚುವ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ...

ಬೆಂಗಳೂರು: ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಸೀರೆ ಹಂಚುವ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.

25ನೇ ವಾರ್ಡ್ ಹೊರಮಾವುನಿಂದ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಭಾರತಿ ಅವರ ಪತಿ ಮುನಿರಾಜು ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಬುಧವಾರ ರಾತ್ರಿ ಬಾಬುಸಾಬ್ ಪಾಳ್ಯದಲ್ಲಿ ಘಟನೆ ನಡೆದಿದೆ. ಮುನಿರಾಜು ಹೆಣ್ಣೂರು ಠಾಣೆಯಲ್ಲಿ ದೂರು ದಾಖಲಿಸಲು ಮುಂದಾದರೂ ಪೊಲೀಸರು ದೂರು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ. ಹಾಗಾಗಿ ಗುರುವಾರ ಬೆಳಗ್ಗೆ ಪೊಲೀಸರ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ನಂತರವಷ್ಟೇ ಪೊಲೀಸರು ದೂರುದಾರರಿಗೆ ರಸೀದಿ ನೀಡಿ ಕಳುಹಿಸಿದ್ದಾರೆ. ಆದರೆ, ಎಫ್ಐಆರ್ ದಾಖಲಿಸಿಲ್ಲ.

ರಾತ್ರಿ ಹಲ್ಲೆ:
ಬುಧವಾರ ರಾತ್ರಿ ಸುಮಾರು 11.30ರ ವೇಳೆ ಕಾಂಗ್ರೆಸ್ ಅಭ್ಯರ್ಥಿ ರಾಧಾ ವೆಂಕಟೇಶ್ ಅವರ ಪರ ಕಾರ್ಯಕರ್ತರು ಬಾಬುಸಾಬ್ ಪಾಳ್ಯದಲ್ಲಿ ಸೀರೆ ಹಂಚುತ್ತಿದ್ದರು. ಅದನ್ನು ತಿಳಿದ ಬಿಜೆಪಿ ಕಾರ್ಯಕರ್ತರು ಅಲ್ಲಿನ ಬಿಜೆಪಿ ಅಭ್ಯರ್ಥಿ ಭಾರತಿ ಮುನಿರಾಜು ಅವರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಮುನಿರಾಜು ಸೀರೆ ಹಂಚುತ್ತಿದ್ದ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಮುನಿರಾಜು ಮೇಲೆ ಕಾಂಗ್ರೆಸ್‍ನವರು ಹಲ್ಲೆ ಮಾಡಿದ್ದಾರೆ.

ಕಾರ್ಯಕರ್ತರ ಮಾರಾಮಾರಿ: ಚುನಾವಣಾ ಪ್ರಚಾರ ಸಂಬಂಧ ರಾಜಗೋಪಾಲನಗರದ ರಾಜೇಶ್ವರಿ ನಗರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಬುಧವಾರ ರಾತ್ರಿ ಘಟನೆ ನಡೆದಿದ್ದು, ಜೆಡಿಎಸ್ ಅಭ್ಯರ್ಥಿ(ಪೀಣ್ಯ ಕೈಗಾರಿಕಾ ಪ್ರದೇಶ ವಾರ್ಡ್ 41) ಲತಾ ಅವರ ಪತಿ, ಸಹೋದರನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಸಿ.ಜೆ. ರಮೇಶ್ ಹಾಗೂ ಸಹೋದರ ಗೋಪಾಲ್ ಹಲ್ಲೆಗೊಳಗಾದವರು. ರಾಜಗೋಪಾಲನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಲಗ್ಗೆರೆಯ ನರಸಿಂಹಮೂತಿರ್ , ಚೇತನ್ ಹಾಗೂ ದೇವೇಗೌಡ ಎಂಬುವವರನ್ನು ಬಂಧಿಸಲಾಗಿದೆ. ಪ್ರಾಣಾಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT