ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಮರದ ಕೊಂಬೆ ಬಿದ್ದು ಮತದಾರ ಸಾವು: ಬಿಬಿಎಂಪಿ ಚುನಾವಣೆ ವೇಳೆ ದುರ್ಘಟನೆ

ಮತದಾರರೊಬ್ಬರು ಮತಗಟ್ಟೆಗೆ ತಮ್ಮ ಹಕ್ಕು ಚಲಾಯಿಸಲು ತೆರಳುತ್ತಿದ್ದ ವೇಳೆ ಮರದ ಕೊಂಬೆ ಬಿದ್ದು ಸಾವನ್ನಪ್ಪಿರುವ ಘಟನೆ ಶಿವಾಜಿನಗರದಲ್ಲಿ ಶನಿವಾರ...

ಬೆಂಗಳೂರು: ಮತದಾರರೊಬ್ಬರು ಮತಗಟ್ಟೆಗೆ ತಮ್ಮ ಹಕ್ಕು ಚಲಾಯಿಸಲು ತೆರಳುತ್ತಿದ್ದ ವೇಳೆ ಮರದ ಕೊಂಬೆ ಬಿದ್ದು ಸಾವನ್ನಪ್ಪಿರುವ ಘಟನೆ ಶಿವಾಜಿನಗರದಲ್ಲಿ ಶನಿವಾರ ನಡೆದಿದೆ.

ಫಯಾಜ್ ಝಹೀದ್ (28) ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಶಿವಾಜಿನಗರ ಜೂನಿಯರ್ ಕಾಲೇಜಿಗೆ ತಮ್ಮ ಪೋಷಕರೊಂದಿಗೆ ಮತ ಚಲಾಯಿಸಲು ತೆರಳಿದ್ದರು. ಅವರ ತಂದೆ-ತಾಯಿ ವೋಟು ಹಾಕಿ ಮತಗಟ್ಟೆಯಿಂದ ಹೊರಬಂದು ಆಗಿತ್ತು. ಫಯಾಜ್ ಮತಗಟ್ಟೆಯ ಒಳಗೆ ಕಾಲಿಡುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.

ಕೂಡಲೇ ಫಯಾಜ್ ಅವರನ್ನು ಬೌರಿಂಗ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋದರೂ ಪ್ರಯೋಜನವಾಗಲಿಲ್ಲ. ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. ಮರದ ಕೊಂಬೆ ಅವರ ತಲೆಯ ಬಲಭಾಗಕ್ಕೆ ಬಿದ್ದು ರಕ್ತ ಒಂದೇ ಸಮನೆ ಸುರಿಯುತ್ತಿತ್ತು ಎಂದು ಸ್ಥಳದಲ್ಲಿದ್ದ ಪೊಲೀಸರು ತಿಳಿಸಿದ್ದಾರೆ.

ನಗರದ ಕನ್ನಿಂಗ್ ಹ್ಯಾಂ ರಸ್ತೆಯ ಬಳಿ ಕುಟುಂಬದವರೊಂದಿಗೆ ವಾಸಿಸುತ್ತಿದ್ದ ಫಯಾಜ್ ಸ್ವಂತ ವ್ಯಾಪಾರ ನಡೆಸುತ್ತಿದ್ದು, ಎಲ್ಲರೊಂದಿಗೆ ಬೆರೆಯುವ ವ್ಯಕ್ತಿಯಾಗಿದ್ದರು. ಈ ಘಟನೆಯಿಂದ ಹೊರಬರಲು ಪೋಷಕರಿಗೆ ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT