ಹೈಕೋರ್ಟ್(ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಬಿಬಿಎಂಪಿ ಚುನಾವಣೆ: ಹಾರಾಡದ ಬಾವುಟ, ಮರೆಯಾದ ಚಿಹ್ನೆ

ರತಿ ದಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿ ಮುಂದೆ ಹಾರಾಡುತ್ತಿದ್ದ ಪಕ್ಷದ ಬಾವುಟ ಶನಿವಾರ ಹಾರಾಡಲಿಲ್ಲ, ಪಕ್ಷದ ಚಿಹ್ನೆ ಕಾಣಲಿಲ್ಲ!...

ಬೆಂಗಳೂರು: ಪ್ರತಿ ದಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿ ಮುಂದೆ ಹಾರಾಡುತ್ತಿದ್ದ ಪಕ್ಷದ ಬಾವುಟ ಶನಿವಾರ ಹಾರಾಡಲಿಲ್ಲ, ಪಕ್ಷದ ಚಿಹ್ನೆ ಕಾಣಲಿಲ್ಲ!

ಹೈಕೋರ್ಟ್ ನಿರ್ದೇಶನದಂತೆ ಬಿಜೆಪಿಯು ತನ್ನ ಬಾವುಟವನ್ನು ಒಂದು ದಿನದ ಮಟ್ಟಿಗೆ ತೆಗೆದಿಟ್ಟಿತ್ತು. ಕಾರಣ, ಪಕ್ಷದ ಕಚೇರಿ ಮುಂದೆಯೇ ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಒಂದು ಮತದಾನ ಕೇಂದ್ರವಿತ್ತು. ಈ ಹಿನ್ನೆಲೆಯಲ್ಲಿ ಪಕ್ಷದ ಚಿಹ್ನೆ, ಬಾವುಟ ಪ್ರದರ್ಶಿಸದಂತೆ ಚುನಾವಣಾ ಆಯೋಗ ಪಕ್ಷಕ್ಕೆ ಸೂಚಿಸಿತ್ತು.

ಆಯೋಗದ ಸೂಚನೆಗೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ, ಮತಗಟ್ಟೆಯನ್ನೇ ಸ್ಥಳಾಂತರಿಸುವಂತೆ ಆ.14ರಂದು ಆಯೋಗಕ್ಕೆ ಮನವಿ ಸಲ್ಲಿಸಿತ್ತು. ಆ.16ರಂದು ಬಿಜೆಪಿಯ ಮನವಿ ತಿರಸ್ಕರಿಸಿದ ಆಯೋಗ ಮತಗಟ್ಟೆ ಸ್ಥಳಾಂತರಿಸಲು ಸಾಧ್ಯವಿಲ್ಲ ಎಂದಿತು. ತಕ್ಷಣವೇ ಬಿಜೆಪಿಯು ಹೈಕೋರ್ಟ್ ಮೆಟ್ಟಿಲೇರಿತು. ಆದರೆ, ಚುನಾವಣೆ ಅತಿ ಸಮೀಪವಿರುವುದರಿಂದ ಮತದಾನ ಕೇಂದ್ರ ಬದಲಿಸಿದರೆ ಮತದಾರರಿಗೆ ಗೊಂದಲ ಉಂಟಾಗಬಹುದು. ಹೀಗಾಗಿ ಮನವಿ ಪುರಸ್ಕರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.

ಪಕ್ಷದ ಧ್ವಜ ಹಾರಿಸುವಂತಿಲ್ಲ ಮತ್ತು ಚಿಹ್ನೆ ಪ್ರದರ್ಶಿಸುವಂತಿಲ್ಲ ಎಂದು ಆದೇಶಿಸಿತು. ಅದರಂತೆ ಶನಿವಾರದ ಮತದಾನದಲ್ಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಧ್ವಜ ಮತ್ತು ಚಿಹ್ನೆ ಕಾಣದಂತೆ ಮರೆಮಾಚಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT