ಹೈಕೋರ್ಟ್(ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಬಿಬಿಎಂಪಿ ಚುನಾವಣೆ: ಹಾರಾಡದ ಬಾವುಟ, ಮರೆಯಾದ ಚಿಹ್ನೆ

ರತಿ ದಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿ ಮುಂದೆ ಹಾರಾಡುತ್ತಿದ್ದ ಪಕ್ಷದ ಬಾವುಟ ಶನಿವಾರ ಹಾರಾಡಲಿಲ್ಲ, ಪಕ್ಷದ ಚಿಹ್ನೆ ಕಾಣಲಿಲ್ಲ!...

ಬೆಂಗಳೂರು: ಪ್ರತಿ ದಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿ ಮುಂದೆ ಹಾರಾಡುತ್ತಿದ್ದ ಪಕ್ಷದ ಬಾವುಟ ಶನಿವಾರ ಹಾರಾಡಲಿಲ್ಲ, ಪಕ್ಷದ ಚಿಹ್ನೆ ಕಾಣಲಿಲ್ಲ!

ಹೈಕೋರ್ಟ್ ನಿರ್ದೇಶನದಂತೆ ಬಿಜೆಪಿಯು ತನ್ನ ಬಾವುಟವನ್ನು ಒಂದು ದಿನದ ಮಟ್ಟಿಗೆ ತೆಗೆದಿಟ್ಟಿತ್ತು. ಕಾರಣ, ಪಕ್ಷದ ಕಚೇರಿ ಮುಂದೆಯೇ ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಒಂದು ಮತದಾನ ಕೇಂದ್ರವಿತ್ತು. ಈ ಹಿನ್ನೆಲೆಯಲ್ಲಿ ಪಕ್ಷದ ಚಿಹ್ನೆ, ಬಾವುಟ ಪ್ರದರ್ಶಿಸದಂತೆ ಚುನಾವಣಾ ಆಯೋಗ ಪಕ್ಷಕ್ಕೆ ಸೂಚಿಸಿತ್ತು.

ಆಯೋಗದ ಸೂಚನೆಗೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ, ಮತಗಟ್ಟೆಯನ್ನೇ ಸ್ಥಳಾಂತರಿಸುವಂತೆ ಆ.14ರಂದು ಆಯೋಗಕ್ಕೆ ಮನವಿ ಸಲ್ಲಿಸಿತ್ತು. ಆ.16ರಂದು ಬಿಜೆಪಿಯ ಮನವಿ ತಿರಸ್ಕರಿಸಿದ ಆಯೋಗ ಮತಗಟ್ಟೆ ಸ್ಥಳಾಂತರಿಸಲು ಸಾಧ್ಯವಿಲ್ಲ ಎಂದಿತು. ತಕ್ಷಣವೇ ಬಿಜೆಪಿಯು ಹೈಕೋರ್ಟ್ ಮೆಟ್ಟಿಲೇರಿತು. ಆದರೆ, ಚುನಾವಣೆ ಅತಿ ಸಮೀಪವಿರುವುದರಿಂದ ಮತದಾನ ಕೇಂದ್ರ ಬದಲಿಸಿದರೆ ಮತದಾರರಿಗೆ ಗೊಂದಲ ಉಂಟಾಗಬಹುದು. ಹೀಗಾಗಿ ಮನವಿ ಪುರಸ್ಕರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.

ಪಕ್ಷದ ಧ್ವಜ ಹಾರಿಸುವಂತಿಲ್ಲ ಮತ್ತು ಚಿಹ್ನೆ ಪ್ರದರ್ಶಿಸುವಂತಿಲ್ಲ ಎಂದು ಆದೇಶಿಸಿತು. ಅದರಂತೆ ಶನಿವಾರದ ಮತದಾನದಲ್ಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಧ್ವಜ ಮತ್ತು ಚಿಹ್ನೆ ಕಾಣದಂತೆ ಮರೆಮಾಚಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ- ಬಿಜೆಪಿ

SCROLL FOR NEXT