ಧಾರವಾಡ ಬಂದ್ ನ ಚಿತ್ರ 
ಜಿಲ್ಲಾ ಸುದ್ದಿ

ಧಾರವಾಡ ಬಂದ್ ಪೂರ್ಣ

ಮಹದಾಯಿ ನೀರನ್ನು ಮಲಪ್ರಭೆಗೆ ಹರಿಸುವಂತೆ ಆಗ್ರಹಿಸಿ ವಿವಧ ಸಂಘಟನೆಗಳಿಂದ ಶನಿವಾರ ನಡೆದ ಧಾರವಾಡ ಬಂದ್ ಸಂಪೂರ್ಣವಾಗಿದೆ...

ಧಾರವಾಡ: ಮಹದಾಯಿ ನೀರನ್ನು ಮಲಪ್ರಭೆಗೆ ಹರಿಸುವಂತೆ ಆಗ್ರಹಿಸಿ ವಿವಧ ಸಂಘಟನೆಗಳಿಂದ ಶನಿವಾರ ನಡೆದ ಧಾರವಾಡ ಬಂದ್ ಸಂಪೂರ್ಣವಾಗಿದೆ.
ಬಂದ್ ನಿಂದಾಗಿ ನಗರ ಹಾಗೂ ಹೊರ ವಲಯದ ಎಲ್ಲಾ ಅಂಗಡಿ ಮುಂಗಟ್ಟುಗಳು, ಹೋಟೆಲ್, ಬ್ಯಾಂಕ್, ಎಟಿಎಂ, ಸಿನಿಮಾ ಮಂದಿರ, ಪೆಟ್ರೋಲ್ ಬಂಕ್, ಶಾಲಾ ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳು ಸ್ವಯಂಪ್ರೇರಣೆಯಿಂದ  ಸ್ಥಗಿತವಾಗಿದ್ದವು. ಅಲ್ಲದೆ ಜನರ ಓಡಾಟವೂ ವಿರಳವಾಗಿತ್ತು.

ಬಂದ್ ಮಾಹಿತಿ ಇಲ್ಲದೆ ಧಾರವಾಡಕ್ಕೆ ಆಗಮಿಸಿದವರು ಬಸ್ ಗಳೂ ಇಲ್ಲದೇ, ನಡೆದೇ ಊರುಗಳತ್ತ ಹೆಜ್ಜೆ ಹಾಕುತ್ತಿದ್ದರು. ರಸ್ತೆಗಳಲ್ಲಿ ಎತ್ತಿನ ಬಂಡಿ, ಬೈಕ್ ಗಳನ್ನು ಅಡ್ಡವಾಗಿ ನಿಲ್ಲಿಸಿ ರೈತರು ಸಂಚಾರ ಸ್ಥಗಿತಗೊಳಿಸಿದರು. ಉತ್ತರ ಕರ್ನಾಟಕದ ಹಲವು ಮಠಾಧೀಶರ ನೈತೃತ್ವದಲ್ಲಿ ಹತ್ತಾರು ಸಂಘಟನೆಗಳು ಕಲಾಭವನದಲ್ಲಿ ಒಟ್ಟಗೂಡಿ ಹೋರಾಟಕ್ಕೆ ಚಾಲನೆ ನೀಡಿದವು. ರಾಷ್ಟ್ರ ಧ್ವಜಾರೋಹಣ ಮಾಡಿ ಹೋರಾಟಕ್ಕೆ ಜಯವಾಗಲಿ ಎಂದು ಮುಖಂಡರು ಘೋಷಣೆಯಿಟ್ಟರು. ಮಹದಾಯಿ ನೀರು ಹರಿಸುವಂತೆ ಜಿಲ್ಲಾಧಿಕಾರಿ ಕಚೇರಿವರೆಗೂ ಬೃಹತ್ ಪ್ರತಿಭಟನೆ ನಡೆಯಿತು. ದಾರಿಯುದ್ದಕ್ಕೂ ಸರ್ಕಾರಗಳ ವಿರುದ್ಧ ಘೋಷಣೆ ಕೂಗಲಾಯಿತು. ಐದು ಪ್ರಮುಖ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT