ರಾಜ್ಯ ಚುನಾವಣಾ ಆಯುಕ್ತ ಪಿ.ಎನ್.ಶ್ರೀನಿವಾಸಾಚಾರಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಬಿಬಿಎಂಪಿ ಚುನಾವಣೆ: ಶೇ.49 ಪಾಸ್, ಬಾಕಿ ಫೇಲ್

ಬಿಬಿಎಂಪಿ ಚುನಾವಣೆಯ ಮತದಾನ ಪ್ರಮಾಣದ ಅಂತಿಮ ವಿವರ ಹೊರಬಂದಿದ್ದು, ನಗರದಲ್ಲಿ ಶೇ.49.31ರಷ್ಟು ಮತದಾನವಾಗಿದೆ. ಇದು ಕಳೆದ ಬಾರಿಗಿಂತ ಶೇ.5.27ರಷ್ಟು ಮಾತ್ರ ಹೆಚ್ಚಳ ಎಂಬುದು ಚುನಾವಣಾ ಆಯೋಗದ ಬೇಸರ...

ಬೆಂಗಳೂರು: ಬಿಬಿಎಂಪಿ ಚುನಾವಣೆಯ ಮತದಾನ ಪ್ರಮಾಣದ ಅಂತಿಮ ವಿವರ ಹೊರಬಂದಿದ್ದು, ನಗರದಲ್ಲಿ ಶೇ.49.31ರಷ್ಟು ಮತದಾನವಾಗಿದೆ. ಇದು ಕಳೆದ ಬಾರಿಗಿಂತ ಶೇ.5.27ರಷ್ಟು ಮಾತ್ರ ಹೆಚ್ಚಳ ಎಂಬುದು ಚುನಾವಣಾ ಆಯೋಗದ ಬೇಸರ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ರಾಜ್ಯ ಚುನಾವಣಾ ಆಯುಕ್ತ ಪಿ.ಎನ್.ಶ್ರೀನಿವಾಸಾಚಾರಿ, 2010ರ ಚುನಾವಣೆಯಲ್ಲಿ ಶೇ.44.04 ಹಾಗೂ 2001ರಲ್ಲಿ 44.32ರಷ್ಟು ಮತದಾನವಾಗಿತ್ತು. ಈ ಬಾರಿ 197 ವಾರ್ಡ್ ಗಳಿಗೆ ನಡೆದ ಚುನಾವಣೆಯಲ್ಲಿ ಚಿಕ್ಕಪೇಟಿ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ಸಿದ್ದಾಪುರ ವಾರ್ಡ್ ನಲ್ಲಿ ಶೇ.62.14 ಅತಿ ಹೆಚ್ಚು ಹಾಗೂ ಮಹದೇವಪುರ ವಿಧಾನಸಭಾ ಕ್ಷೇತ್ರದ ದೊಡ್ಡನೆಕ್ಕುಂದಿ ವಾರ್ಡ್ ನಲ್ಲಿ ಶೇ.37.83 ರ ಪ್ರಮಾಣದಲ್ಲಿ ಅತಿ ಕಡಿಮೆ ಮತದಾನವಾಗಿದೆ. ಈ ಮೂಲಕ ಚುನಾವಣಾ ಆಯೋಗದ ಶೇ.60ರ ಪ್ರಮಾಣದ ಮತದಾನದ ನಿರೀಕ್ಷೆ ಹುಸಿಯಾಗಿದೆ ಎಂದರು.

ಪ್ರಮಾಣ ಕಡಿಮೆಯಾದರೂ ಪ್ರಕ್ರಿಯೆ ಶಾಂತ: ಕೆಲವು ಮತಗಟ್ಟೆಗಳಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿರುವುದು, ನಕಲಿ ಮತದಾರರಿಂದ ಗೊಂದಲದಂತಹ ಪ್ರಕರಣ ಬಿಟ್ಟರೆ, ಮತದಾನ ಪ್ರಕ್ರಿಯೆಗೆ ತೊಂದರೆಯಾಗುವ ಯಾವುದೇ ಘಟನೆಗಳು ನಡೆದಿಲ್ಲ. ಹೀಗಾಗಿ ಎಲ್ಲಿಯೂ ಮರುಮತದಾನದ ಅಗತ್ಯ ಉಂಟಾಗಿಲ್ಲ ಎಂದರು.

ಕಳೆದ ಬಿಬಿಎಂಪಿ ಚುನಾವಣೆಗಳಲ್ಲಿ ಮತದಾನ ಪ್ರಮಾಣ ಕಡಿಮೆಯಾಗಿತ್ತು. ಈ ಬಾರಿ ಪ್ರಮಾಣ ಹೆಚ್ಚಿಸಲು ವಿವಿಧ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಲಾಗಿತ್ತು. ಆದರೂ ಆಯೋಗ ನಿರೀಕ್ಷಿಸಿದ ಪ್ರಮಾಣದಲ್ಲಿ ಮತದಾನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಜಿ.ಕುಮಾರ್ ನಾಯಕ್ ಮಾತನಾಡಿ, ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಮಾಡಲಾಗಿತ್ತು. ಆದರೆ, ಇದು ಮತದಾರರ ಮೇಲೆ ಪರಿಣಾಮ ಬೀರಿಲ್ಲ. ಆಯೋಗದ ನಿರೀಕ್ಷೆಯಂತೆ ಮತದಾನ ನಡೆದಿಲ್ಲ. ಶೇ.49ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗಬೇಕಿತ್ತು ಎಂದರು.

27ಕೇಂದ್ರಗಳಲ್ಲಿ ಮತ ಎಣಿಕೆ
`ವಿಧಾನಸಭಾ ಕ್ಷೇತ್ರವಾರು 27 ಮತ ಎಣಿಕೆ ಕೇಂದ್ರಗಳಲ್ಲಿ ಮಂಗಳವಾರ ಬೆ. 8ಕ್ಕೆ ಎಣಿಕೆ ಕಾರ್ಯ ಆರಂಭವಾಗಲಿದೆ. ಎಣಿಕೆ ಕೇಂದ್ರದಲ್ಲಿ ಗರಿಷ್ಠ 14 ಟೇಬಲ್‍ಗಳಿಗೆ ಮಾತ್ರ ಅವಕಾಶವಿದೆ.  ಮೊದಲಿಗೆ ಅಂಚೆ ಮತ ಎಣಿಕೆ ಕಾರ್ಯ ಪೂರ್ಣಗೊಳಿಸಿ, ನಂತರ ಯಂತ್ರಗಳಲ್ಲಿನ ಮತ ಎಣಿಸಲಾಗುತ್ತದೆ. ಆದರೆ ಮರು ಮತದಾನ ಎಲ್ಲಿಯೂ ಇಲ್ಲ' ಎಂದು ಜಿಲ್ಲಾ ಚುನಾವಣಾಧಿಕಾರಿ ಜಿ.ಕುಮಾರ್ ನಾಯಕ್ ತಿಳಿಸಿದರು. 304 ಚುನಾವಣಾಧಿಕಾರಿ, ಹೆಚ್ಚುವರಿ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಇಕಾರಿ, 3,180 ಮತ ಎಣಿಕೆ ಸಿಬ್ಬಂದಿ ಯೋಜಿಸಲಾಗಿದೆ. ಮತ ಎಣಿಕೆ ಕೇಂದ್ರದ 1 ಕಿ.ಮೀ ವ್ಯಾಪ್ತಿಯವರೆಗೆ ಬೆ. 6ರಿಂದ ರಾತ್ರಿ 8ರವರೆಗೆ ಮದ್ಯಪಾನ ನಿಷೇಧ ಪ್ರದೇಶ ಎಂದು ಘೋಷಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT