ಎರಡು ವರ್ಷಗಳ ಹಿಂದೆ ಬೋಸ್ಚ್ ಘಟಕದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ 
ಜಿಲ್ಲಾ ಸುದ್ದಿ

ಕೈಗಾರಿಕೋದ್ಯಮದ ಬೆಳವಣಿಗೆಗೆ ನೀತಿ: ಮುಖ್ಯಮಂತ್ರಿ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕೋದ್ಯಮದ ಬೆಳವಣಿಗೆಗೆ ಹೊಸ ಕೈಗಾರಿಕಾ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ...

ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕೋದ್ಯಮದ ಬೆಳವಣಿಗೆಗೆ ಹೊಸ ಕೈಗಾರಿಕಾ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಗುರುವಾರ ತಿಳಿಸಿದ್ದಾರೆ.

ಅವರು ಇಂದು ಬಿಡದಿಯಲ್ಲಿ ಬೋಸ್ಚ್ ಸಂಸ್ಛೆಯ ಹೊಸ ಘಟಕವನ್ನು ಉದ್ಘಾಟಿಸಿ ಮಾತನಾಡಿ, ಕೈಗಾರಿಕೆಗಳ ಬೆಳವಣಿಗೆಗೆ ಸರ್ಕಾರ ಮುಂದಿನ ನವೆಂಬರ್ ತಿಂಗಳಲ್ಲಿ 'ಕರ್ನಾಟಕದಲ್ಲಿ ಹೂಡಿಕೆ ಮಾಡಿ' ಎಂಬ ಅಡಿಬರಹದೊಂದಿಗೆ ಜಾಗತಿಕ ಹೂಡಿಕೆದಾರರ ಸಮ್ಮೇಳನವನ್ನು ಆಯೋಜಿಸಲಿದೆ ಎಂದು ಹೇಳಿದರು.

ನಮ್ಮ ರಾಜ್ಯದಲ್ಲಿ ವ್ಯಾಪಾರ, ವ್ಯವಹಾರವನ್ನು ಸುಲಲಿತವಾಗಿ ಮಾಡಲು ಆನ್ ಲೈನ್ ಮೂಲಕ ಸರ್ಕಾರದ ಅನುಮೋದನೆ ಪಡೆಯಬಹುದು. ಕೈಗಾರಿಕಾ ವಲಯಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದರು.

ಕೈಗಾರಿಕೆಗಳನ್ನು ಜಿಲ್ಲಾ ಕೇಂದ್ರಗಳಲ್ಲಿಯೂ ಸ್ಥಾಪಿಸುವುದರಿಂದ ಯುವಕರು ಉದ್ಯೋಗವನ್ನರಸಿಕೊಂಡು ಬೆಂಗಳೂರಿಗೆ ಬರುವುದು ತಪ್ಪುತ್ತದೆ. ಅಲ್ಲದೆ ನಮ್ಮ ದೇಶದಲ್ಲಿ ಕರ್ನಾಟಕ ರಾಜ್ಯವು ಪ್ರಮುಖ ಕೈಗಾರಿಕೋದ್ಯಮ ರಾಜ್ಯವಾಗಿ ಮಾರ್ಪಾಡಾಗಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!