ಎರಡು ವರ್ಷಗಳ ಹಿಂದೆ ಬೋಸ್ಚ್ ಘಟಕದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ 
ಜಿಲ್ಲಾ ಸುದ್ದಿ

ಕೈಗಾರಿಕೋದ್ಯಮದ ಬೆಳವಣಿಗೆಗೆ ನೀತಿ: ಮುಖ್ಯಮಂತ್ರಿ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕೋದ್ಯಮದ ಬೆಳವಣಿಗೆಗೆ ಹೊಸ ಕೈಗಾರಿಕಾ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ...

ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕೋದ್ಯಮದ ಬೆಳವಣಿಗೆಗೆ ಹೊಸ ಕೈಗಾರಿಕಾ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಗುರುವಾರ ತಿಳಿಸಿದ್ದಾರೆ.

ಅವರು ಇಂದು ಬಿಡದಿಯಲ್ಲಿ ಬೋಸ್ಚ್ ಸಂಸ್ಛೆಯ ಹೊಸ ಘಟಕವನ್ನು ಉದ್ಘಾಟಿಸಿ ಮಾತನಾಡಿ, ಕೈಗಾರಿಕೆಗಳ ಬೆಳವಣಿಗೆಗೆ ಸರ್ಕಾರ ಮುಂದಿನ ನವೆಂಬರ್ ತಿಂಗಳಲ್ಲಿ 'ಕರ್ನಾಟಕದಲ್ಲಿ ಹೂಡಿಕೆ ಮಾಡಿ' ಎಂಬ ಅಡಿಬರಹದೊಂದಿಗೆ ಜಾಗತಿಕ ಹೂಡಿಕೆದಾರರ ಸಮ್ಮೇಳನವನ್ನು ಆಯೋಜಿಸಲಿದೆ ಎಂದು ಹೇಳಿದರು.

ನಮ್ಮ ರಾಜ್ಯದಲ್ಲಿ ವ್ಯಾಪಾರ, ವ್ಯವಹಾರವನ್ನು ಸುಲಲಿತವಾಗಿ ಮಾಡಲು ಆನ್ ಲೈನ್ ಮೂಲಕ ಸರ್ಕಾರದ ಅನುಮೋದನೆ ಪಡೆಯಬಹುದು. ಕೈಗಾರಿಕಾ ವಲಯಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದರು.

ಕೈಗಾರಿಕೆಗಳನ್ನು ಜಿಲ್ಲಾ ಕೇಂದ್ರಗಳಲ್ಲಿಯೂ ಸ್ಥಾಪಿಸುವುದರಿಂದ ಯುವಕರು ಉದ್ಯೋಗವನ್ನರಸಿಕೊಂಡು ಬೆಂಗಳೂರಿಗೆ ಬರುವುದು ತಪ್ಪುತ್ತದೆ. ಅಲ್ಲದೆ ನಮ್ಮ ದೇಶದಲ್ಲಿ ಕರ್ನಾಟಕ ರಾಜ್ಯವು ಪ್ರಮುಖ ಕೈಗಾರಿಕೋದ್ಯಮ ರಾಜ್ಯವಾಗಿ ಮಾರ್ಪಾಡಾಗಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT