(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಗೋದಾಮಿಗೆ ಬೆಂಕಿ: ತಪ್ಪಿದ ಅನಾಹುತ

ಶಿವಾಜಿ ನಗರದ ಬಿಬಿಎಂಪಿ ಛೋಟಾ ಮೈದಾನ- ದಲ್ಲಿರುವ ವ್ಯರ್ಥ ವಸ್ತುಗಳ ಸಂಗ್ರಹಗಾರದಲ್ಲಿ ಅಗ್ನಿಅನಾಹುತ ಸಂಭವಿಸಿ...

ಬೆಂಗಳೂರು: ಶಿವಾಜಿ ನಗರದ ಬಿಬಿಎಂಪಿ ಛೋಟಾ ಮೈದಾನ- ದಲ್ಲಿರುವ ವ್ಯರ್ಥ ವಸ್ತುಗಳ ಸಂಗ್ರಹಗಾರದಲ್ಲಿ ಅಗ್ನಿಅನಾಹುತ ಸಂಭವಿಸಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. 11.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಅಗ್ನಿಶಾಮಕ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದರು.

ಸ್ಥಳಕ್ಕೆ ಆಗಮಿಸಿದ ಐದು ಅಗ್ನಿಶಾಮಕ ವಾಹನಗಳು ಒಂದು ತಾಸುಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿವೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ಮಾಹಿತಿ ನೀಡಿದರು. ಘಟನೆಯಿಂದ ಶಿವಾಜಿನಗರ ಸುತ್ತ ಮುತ್ತ ಕೆಲ ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಅಲ್ಲದೇ ಬಿಎಂಟಿಸಿ ಬಸ್ ನಿಲ್ದಾಣದ ಒಂದು ಪ್ಲಾಟ್ ಫಾರ್ಮ್ ನಲ್ಲಿ ಕೆಲ ಕಾಲ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು.

ಹೊರ ಜಿಲ್ಲೆಗಳಿಂದ ಲಾರಿಗಳಲ್ಲಿ ಥರ್ಮಕೋಲ್ ಸೇರಿದಂತೆ ವಿವಿಧ ಕಂಟೇನರ್‍ಗಳಲ್ಲಿ ಮೀನುಗಳನ್ನು ತರಲಾಗುತ್ತಿತ್ತು. ಮೀನುಗಳು ಮಾರುಕಟ್ಟೆಗೆ ತಲುಪಿಸಿದ ನಂತರ ಥರ್ಮಕೋಲ್ ಹಾಗೂ ವಿವಿಧ ರಟ್ಟಿನ ಕಂಟೇನರ್‍ಗಳನ್ನು ಸಂಗ್ರಹಿಸಿಡಲು ಶರೀಫ್ ಎಂಬುವರು ಒಳಾಂಗಣ ಕ್ರೀಡಾಂಗಣದ ನೆಲಮಹಡಿಯನ್ನು ಗುತ್ತಿಗೆ ಪಡೆದಿದ್ದಾರೆ. ಆದರೆ, ವ್ಯರ್ಥ ವಸ್ತುಗಳನ್ನು ಕಾಲ ಕಾಲಕ್ಕೆ ಬೇರೆಡೆಗೆ ಸಾಗಿಸದ ಕಾರಣ ಭಾರಿ ಪ್ರಮಾಣದಲ್ಲಿ ಸಂಗ್ರಹವಾಗಿತ್ತು. ಸಂಗ್ರಹವಾಗಿದ್ದ ವಸ್ತುಗಳಿಗೆ ಸಾರ್ವಜನಿಕರು ಸೇದಿದ ಬೀಡಿ, ಸಿಗರೇಟು ಬಿಸಾಡಿದ್ದ ಕಾರಣ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ಅಗ್ನಿಶಾಮಕ ಅಧಿಕಾರಿ ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

GBA ಆಯ್ತು.. ಈಗ ಗ್ರೇಟರ್ ಮೈಸೂರು ಸಿಟಿ ಕಾರ್ಪೋರೇಷನ್ ಗೆ ಸಂಪುಟ ಅನುಮೋದನೆ!

'ಮಾತು' ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಮಹಿಳೆಗೆ ಕಚ್ಚಿದ ನಾಯಿ, ಪ್ರಶ್ನೆ ಮಾಡಿದ ಸಂತ್ರಸ್ಥೆಗೆ ಮಾಲಕಿ ಕಪಾಳಮೋಕ್ಷ, Video Viral

ಸಂಸತ್ತಿನಲ್ಲಿ 'ವಂದೇ ಮಾತರಂ', 'ಜೈ ಹಿಂದ್' ಘೋಷಣೆಗಳಿಗೆ ಆಕ್ಷೇಪಣೆ ಯಾಕೆ?: ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್

ಯುದ್ಧ ಸಾರಿದ ನ್ಯೂಜಿಲೆಂಡ್, 25 ಲಕ್ಷ Stone Cold Killers ನಿರ್ಮೂಲನೆ ಮಾಡುವ ಶಪಥ!

SCROLL FOR NEXT