(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಸಲ್ಲೇಖನ ವ್ರತ ನಿಷೇಧ ತೀರ್ಪು ಖಂಡಿಸಿ ಜೈನರ ಪ್ರತಿಭಟನೆ

ಸಲ್ಲೇಖನ ವ್ರತಕ್ಕೆ ನಿಷೇಧ ಹೇರಿರುವ ರಾಜಸ್ಥಾನ ಹೈಕೋರ್ಟ್ ತೀರ್ಪು ವಿರೋಧಿಸಿ ಸಾವಿರಾರು ಜೈನ ಧರ್ಮಿಯರು ಗುರುವಾರ ಮೌನ ಪ್ರತಿಭಟನೆ ನಡೆಸಿದರು...

ಬೆಂಗಳೂರು: ಸಲ್ಲೇಖನ ವ್ರತಕ್ಕೆ ನಿಷೇಧ ಹೇರಿರುವ ರಾಜಸ್ಥಾನ ಹೈಕೋರ್ಟ್ ತೀರ್ಪು ವಿರೋಧಿಸಿ ಸಾವಿರಾರು ಜೈನ ಧರ್ಮಿಯರು ಗುರುವಾರ ಮೌನ ಪ್ರತಿಭಟನೆ ನಡೆಸಿದರು.

ಚಿಕ್ಕಪೇಟೆಯ ಆದಿನಾಥ ಮಂದಿರದಿಂದ ಸ್ವಾತಂತ್ರ್ಯ ಉದ್ಯಾನವರೆಗೆ ಮೌನ ಮೆರವಣಿಗೆ ನಡೆಸಿದ ನಂತರ ಬಹಿರಂಗ ಸಭೆ ನಡೆಸಿದರು. ಬಳಿಕ ಪ್ರತಿಭಟನೆ ಸಂಯೋಜಕ ಸಜ್ಜನ್ ರಾಜ್ ಮೆಹ್ತಾ ನೇತೃತ್ವದಲ್ಲಿ ಧಾರ್ಮಿಕ ಮುಖಂಡರು ರಾಜಪಾಲರನ್ನು ಭೇಟಿ ಮಾಡಿ ಹೈಕೋರ್ಟ್ ನೀಡಿರುವ ತೀರ್ಪು ವಾಪಸ್ ಪಡೆಯುವಂತೆ ಒತ್ತಡ ಹೇರಲು ಮನವಿ ಸಲ್ಲಿಸಿದರು.

ಜೈನ ಧರ್ಮದ ಆಚರಣೆಯ ಪ್ರಮುಖ ಅಂಗವಾದ ಸಲ್ಲೇಖನ ವ್ರತ ಆತ್ಮಹತ್ಯೆಗೆ ಸಮಾನ. ಇದರ ಆಚರಣೆ ಭಾರತೀಯ ದಂಡ ಸಂಹಿತೆ 306 (ಆತ್ಮಹತ್ಯೆಗೆ ಪ್ರೇರಣೆ) ಮತ್ತು 309ರ(ಆತ್ಮಹತ್ಯೆಗೆ ಯತ್ನ) ಅನುಸಾರ ಶಿಕ್ಷಾರ್ಹ ಎಂದು ಹೈಕೋರ್ಟ್ ನೀಡಿರುವ ತೀರ್ಪಿನಿಂದ ಜೈನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ಸಜ್ಜನ್ ರಾಜ್ ಮೆಹ್ತಾ ಹೇಳಿದರು.

ಸಾವಿರಾರು ವರ್ಷಗಳಿಂದ ಜೈನ ಧರ್ಮಿಯರು ಸಲ್ಲೇಖನ ವ್ರತ ಆಚರಿಸಿಕೊಂಡು ಬರುತ್ತಿದ್ದಾರೆ. ಧರ್ಮದ ಬಗ್ಗೆ ಸಂಪೂರ್ಣ ಜ್ಞಾನ ಹೊಂದಿರುವವರು ಮತ್ತು ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವರು ಮಾತ್ರ ಈ ವ್ರತ ಕೈಗೊಳ್ಳುತ್ತಾರೆ. ಈ ವ್ರತ ಕೈಗೊಳ್ಳುವ ಮೊದಲು ಕುಟುಂಬ ಸದಸ್ಯರು, ಸಂಬಂಧಿಕರ ಮತ್ತು ಧಾರ್ಮಿಕ ಮುಖಂಡರ ಅನುಮತಿ ಪಡೆಯಬೇಕಾಗಿದೆ ಇದರಿಂದ ಯಾರಿಗೂ ನೋವು ಉಂಟಾಗುವುದಿಲ್ಲ ಎಂದು ಮೆಹ್ತಾ ಹೇಳಿದರು.

ಕಾಯಿಲೆಯಿಂದ ಬಳಲುತ್ತಿರುವ, ವೃದ್ಧಾಪ್ಯ ತಲುಪಿ ಸಾವಿನಂಚಿನಲ್ಲಿರುವ, ವಾಸಿಯಾಗದ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳು ಆಹಾರ ಸೇವಿಸದೆ ಉಪವಾಸ ಮಾಡಿ ದೇಹ ತ್ಯಾಗ ಮಾಡುವ ಪ್ರಕ್ರಿಯೆಯಲ್ಲೇ ಸಲ್ಲೇಖನ ವ್ರತ. ಇದೊಂದು ಧಾರ್ಮಿಕ ಆಚರಣೆಯೇ ಹೊರತು ಬರೀ ಜೀವ ಬಿಡಲು ಮಾಡುವ ಉಪವಾಸವಲ್ಲ. ಮೋಕ್ಷ ಹೊಂದಲು ಮತ್ತು ಆತ್ಮವನ್ನು ಪವಿತ್ರಗೊಳಿಸಲು ನಡೆಯುವ ಅಂತಿಮ ತಪಸ್ಸು. ಹಾಗಾಗಿ ಧಾರ್ಮಿಕ ವಿಚಾರಗಳಲ್ಲಿ ಕೋರ್ಟ್ ಮಧ್ಯಪ್ರವೇಶ ಸರಿಯಲ್ಲ. ವ್ರತದ ಕುರಿತು ನೀಡಿರುವ ತೀರ್ಪು ವಾಪಸ್ ಪಡೆಯಲು ಒತ್ತಡ ಹೇರಬೇಕೆಂದು ರಾಜ್ಯಪಾಲರ ಮೂಲಕ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

SCROLL FOR NEXT