ಇಎಸ್‌ಐ 
ಜಿಲ್ಲಾ ಸುದ್ದಿ

ಇಎಸ್‌ಐ ಕಾರ್ಡ್‌ದಾರರಿಗೆ ಉಚಿತ ಚಿಕಿತ್ಸೆ ಭಾಗ್ಯ ಇಲ್ಲ

ನೀವು ಇಎಸ್‌ಐ ಕಾರ್ಡ್ ಹೊಂದಿದ್ದರೆ ಇನ್ನು ಮುಂದೆ ನಿಮಗೆ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಮರೀಚಿಕೆ. ಹೌದು. ಸೆಪ್ಟೆಂಬರ್ 1ರಿಂದ ರಾಜ್ಯದ 40...

ಬೆಂಗಳೂರು: ನೀವು ಇಎಸ್‌ಐ ಕಾರ್ಡ್ ಹೊಂದಿದ್ದರೆ ಇನ್ನು ಮುಂದೆ ನಿಮಗೆ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಮರೀಚಿಕೆ. ಹೌದು. ಸೆಪ್ಟೆಂಬರ್ 1ರಿಂದ ರಾಜ್ಯದ 40ಕ್ಕೂ ಹೆಚ್ಚು ಸೂಪರ್ ಸ್ಪೇಷಾಲಿಟಿ ಖಾಸಗಿ ಆಸ್ಪತ್ರೆಗಳು ಇಎಸ್‌ಐ ಚೀಟಿ ಹೊಂದಿರುವ ಬಡ ಕಾರ್ಮಿಕರಿಗೆ ಉಚಿತ ಚಿಕಿತ್ಸೆ ನೀಡದಿರಲು ನಿರ್ಧರಿಸಿವೆ. 
ಈ ಬಗ್ಗೆ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅಸೋಸಿಯೇಶನ್ ಆಫ್ ಹೆಲ್ತ್‍ಕೇರ್ ಪ್ರೊವೈಡರ್ಸ್ ಇಂಡಿಯಾ ಸದಸ್ಯ ಡಾ.ಅಲೆಕ್ಸ್, ನೌಕರರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ಕಳೆದ ಎರಡು ವರ್ಷಗಳಿಂದ ಆಸ್ಪತ್ರೆಗಳಿಗೆ ನೀಡ ಬೇಕಿದ್ದ ನೂರಾರು ಕೋಟಿ ಇಎಸ್‌ಐ ಹಣ ಬಾಕಿ ಉಳಿಸಿಕೊಂಡಿದೆ. ಹಾಗಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳಲ್ಲಿ ಇಎಸ್‌ಐ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡದಿರಲು ಅಸೋಸಿಯೇಶನ್ ತೀರ್ಮಾನಿಸಿದೆ ಎಂದರು.
ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಯಡಿ ರಿಯಾಯಿತಿ ದರ ದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಈ ವೆಚ್ಚವನ್ನು ನೌಕರರ ರಾಜ್ಯ ವಿಮಾ ನಿಗಮ ಪ್ರತಿ ತಿಂಗಳು ಆಸ್ಪತ್ರೆಗಳಿಗೆ ಪಾವತಿಸ ಬೇಕು. ಆದರೆ, ಒಂದು ವರ್ಷದಿಂದ ಈ ಆಸ್ಪತ್ರೆಗಳಿಗೆ ಇಎಸ್‌ಐಸಿ ರು.100 ಕೋಟಿಗೂ ಹೆಚ್ಚು ಹಣ ಬಾಕಿ ಉಳಿಸಿಕೊಂಡಿದೆ ಎಂದು ಅವರು ಆರೋಪಿಸಿದರು.
ವಿಮೆ ಹಣ ಬಾಕಿ ಇರುವ ಕಾರಣ, ಆರೋಗ್ಯ ವಿಮೆ ಹೊಂದಿರುವ ರೋಗಿಗಳು ಚಿಕಿತ್ಸೆಗೆ ತಗಲುವ ಚಿಕಿತ್ಸಾ ವೆಚ್ಚ ಪಾವತಿಸಿದರೆ ಮಾತ್ರ ಚಿಕಿತ್ಸೆ ನೀಡಲಾಗುತ್ತದೆ. ಬಳಿಕ ರೋಗಿಗಳು ಇಎಸ್ಐಸಿಗೆ ಕ್ಲೈಮ್ ಮಾಡಿಕೊಂಡು ಹಣ ಪಡೆಯಬಹುದು ಎಂದು ಸಲಹೆ ನೀಡಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ