ಕರ್ನಾಟಕ ಹೈ ಕೋರ್ಟ್ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಬಹುಮಹಡಿ ಕಟ್ಟಡಗಳಲ್ಲಿ ಅಗ್ನಿ ಸುರಕ್ಷತೆ ಖಾತ್ರಿ ಪಡಿಸಿ: ಹೈಕೋರ್ಟ್

ಬಹುಮಹಡಿ ಕಟ್ಟಡಗಳಲ್ಲಿ ಸಂಭವಿಸುವ ಅಗ್ನಿ ಅವಘಡಗಳಿಂದ ಜನರ ಜೀವಕ್ಕೆ ಹಾನಿಯಾಗದ ರೀತಿಯಲ್ಲಿ ರಾಜ್ಯ ಸರ್ಕಾರ ಅಗ್ನಿ ಸುರಕ್ಷತಾ ಕ್ರಮಗಳ ಕುರಿತು 2012 ಜುಲೈ 7ರಂದು ಹೊರಡಿಸಿದ ಅಧಿಸೂಚನೆಯಲ್ಲಿನ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ...

ಬೆಂಗಳೂರು: ಬಹುಮಹಡಿ ಕಟ್ಟಡಗಳಲ್ಲಿ ಸಂಭವಿಸುವ ಅಗ್ನಿ ಅವಘಡಗಳಿಂದ ಜನರ ಜೀವಕ್ಕೆ ಹಾನಿಯಾಗದ ರೀತಿಯಲ್ಲಿ ರಾಜ್ಯ ಸರ್ಕಾರ ಅಗ್ನಿ ಸುರಕ್ಷತಾ ಕ್ರಮಗಳ ಕುರಿತು 2012 ಜುಲೈ 7ರಂದು ಹೊರಡಿಸಿದ ಅಧಿಸೂಚನೆಯಲ್ಲಿನ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಸರ್ಕಾರ, ಬಿಬಿಎಂಪಿ, ಬಿಡಿಎ, ಜಲಮಂಡಳಿಗೆ ಹೈಕೋರ್ಟ್ ನಿರ್ದೇಶಿಸಿದೆ.

ಕಾರ್ಲ್ಟನ್ ದುರಂತದಿಂದ ಎಚ್ಚೆತ್ತ ಸರ್ಕಾರ ಬಹುಮಹಡಿ ಕಟ್ಟಡಗಳು ಅಗ್ನಿ ಮತ್ತು ತುರ್ತು ಸೇವೆಗಳ ವ್ಯವಸ್ಥೆಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಆದೇಶಿಸಿತ್ತು. ಜತೆಗೆ, ಆ ಸಂಬಂಧ ಅಧಿಸೂಚನೆ ಹೊರಡಿಸಿ ಅಗ್ನಿ ಹಾಗೂ ತುರ್ತುಸೇವೆಗಳ ಮಾರ್ಗಸೂಚಿಗಳನ್ನು ಪ್ರಕಟಿಸಿತ್ತು. ಆದರೆ, ನಗರದ ಬಹುಮಹಡಿಗಳಲ್ಲಿ ಈ ಮಾರ್ಗಸೂಚಿಗಳನ್ನು ಸಮರ್ಪಕವಾಗಿ ಪಾಲಿಸುತ್ತಿಲ್ಲ ಎಂದು ಆರೋಪಿಸಿ ಬಿಯಾಂಡ್ ಕಾಲ್ರ್ಟನ್ ಟವರ್ ಸಂಸ್ಥೆ ಹೈಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಅರ್ಜಿಯಲ್ಲಿ ಸರ್ಕಾರ, ಅಗ್ನಿ ಮತ್ತು ತುರ್ತು ಸೇವೆಗಳ ಇಲಾಖೆ, ಬಿಬಿಎಂಪಿ, ಬಿಡಿಎ, ಜಲಮಂಡಳಿ, ಬೆಂಗಳೂರು ವಿದ್ಯುತ್ ಸರಬರಾಜು ಪ್ರತಿವಾದಿ ಮಾಡಲಾಗಿತ್ತು.

ಸೋಮವಾರ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂತಿರ್  ಎಸ್.ಕೆ. ಮುಖರ್ಜಿ ಮತ್ತು ನ್ಯಾ. ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠ 2011ರ ಜುಲೈ 7ರಂದು
ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಅಗ್ನಿ ಸುರಕ್ಷಿತ ಮಾರ್ಗಗಳನ್ನು ನಗರದಲ್ಲಿ ಅನುಷ್ಠಾನಗೊಳಿಸುವಂತೆ ಸರ್ಕಾರಕ್ಕೆ ಸೂಚಿಸಿ ಅರ್ಜಿ ಇತ್ಯರ್ಥಪಡಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?