ಸ್ಥಳಿಯರೇ ಸಂಚಾರ ಪೊಲೀಸರು! 
ಜಿಲ್ಲಾ ಸುದ್ದಿ

ಸ್ಥಳಿಯರೇ ಸಂಚಾರ ಪೊಲೀಸರು!

ದೇವರಬೀಸನಹಳ್ಳಿ, ಶೋಭಾ ಐರಿಸ್ ಜಂಕ್ಷನ್, ಮಂತ್ರಿ ಸ್ಕ್ವೇರ್, ಸುತ್ತಮುತ್ತಲ ಬಡಾವಣೆಗಳ ಸಿಗ್ನರ್ ರಸ್ತೆಗಳಲ್ಲಿ ಪೊಲೀಸರೇ ಇಲ್ಲ.

ಬೆಂಗಳೂರು: ದೇವರಬೀಸನಹಳ್ಳಿ, ಶೋಭಾ ಐರಿಸ್ ಜಂಕ್ಷನ್, ಮಂತ್ರಿ ಸ್ಕ್ವೇರ್, ಸುತ್ತಮುತ್ತಲ ಬಡಾವಣೆಗಳ ಸಿಗ್ನಲ್ ರಸ್ತೆಗಳಲ್ಲಿ ಪೊಲೀಸರೇ ಇಲ್ಲ. ಅಲ್ಲಿ ಸಾರ್ವಜನಿಕರೇ ಪೊಲೀಸರು. ಈ ಭಾಗದ ರಸ್ತೆಗಳು ಕಿರಿದಾಗಿದ್ದು, ವಾಹನಗಳ ಸಂಖ್ಯೆ ಲಕ್ಷ ದಾಟಿದೆ.
ರಸ್ತೆಗಿಂತ ಹತ್ತುಪಟ್ಟು ವಾಹನಗಳಿವೆ. ಇದರಿಂದ ವಾಹನ ಮಂದಗತಿಯಲ್ಲಿ ಸಾಗಿ, ಸಂಚಾರ ದಟ್ಟಣೆ ಹೆಚ್ಚುತ್ತಿದೆ. ನೋ ಪಾರ್ಕಿಂಗ್ ನಲ್ಲಿ ವಾಹನ ನಿಲುಗಡೆ ಸೇರಿದಂತೆ ಜನರು ಎಲ್ಲಾ ರೀತಿಯ ಸಂಚಾರ ನಿಯಮ ಉಲ್ಲಂಘಿಸುವವರೇ ಹೆಚ್ಚು.
ಇದರಿಂದ ಹೈರಾಣಾದ ಸ್ಥಳೀಯ ಸಾರ್ವಜನಿಕರು ತಾವೇ ಸಂಚಾರ ಪೊಲೀಸರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರತಿನಿತ್ಯ ಬೆಳಿಗ್ಗೆ 7 ರಿಂದ ರಾತ್ರಿ 9 ಗಂಟೆ ವರೆಗೆ ಇವರು ರಸ್ತೆ ಬದಿಗಳಲ್ಲಿ ನಿಂತು ಸಂಚಾರ ಪೊಲೀಸರ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಸಂಚಾರ ಪೊಲೀಸರು ಸಹ ಸಾಥ್ ನೀಡುತ್ತಿದ್ದಾರೆ.
ಹೀಗಿದೆ ಇವರ ಕೆಲಸ: ಸಾರ್ವಜನಿಕರ ಈ ಕೆಲಸದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಆಟೋಚಾಲಕ ರಫೀಕ್, ಈ ಭಾಗದಲ್ಲಿ ಸದಾ ಸಂಚಾರ ದಟ್ಟಣೆ ಇರುತ್ತಿದ್ದ ಕಾರಣ ಶಾಲೆ, ಕಚೇರಿಗಳಿಗೆ ಹೋಗಲು ಜನ ಬೇಗ ಹೊರಡಬೇಕಿತ್ತು. ಸಾಕಷ್ತು ಸಮಯ ರಸ್ತೆಯಲ್ಲೇ ಕಳೇಯಬೇಕಾಗಿತ್ತು. ಹಾಗಾಗಿ ಅಲ್ಲಿನ ಸ್ಥಳೀಯರೆಲ್ಲ ಸೇರಿ ಈ ಕೆಲಸಕ್ಕೆ ಕೈ ಹಾಕಿದ್ದಾರೆ. ಕೆಲ ದಿನಗಳ ನಂತರ ಈ ಬಗ್ಗೆ ತಿಳಿದ ನಾನು ಈ ಸೇವೆಗೆ ಕೈಜೋಡಿಸಿದ್ದೇನೆ. ಆಟೋ ಬಾಡಿಗೆಗೆ ಜನ ಇಲ್ಲದ ವೇಳೆ ತಾನೂ ಸಹ ಸಮೀಪದ ರಸ್ತೆಯಲ್ಲಿ ಕೆಲಸ ಮಾಡುತ್ತೇನೆ. ಅದಕ್ಕೂ ಮುನ್ನ ವಾಟ್ಸ್ ಆಪ್ ನಲ್ಲಿ ಮಾಹಿತಿ ಪಡೆದು ಅವರು ಹೇಳಿದ ಕಡೆ ಕೆಲಸ ಮಾಡುತ್ತೇನೆ ಎಂದಿದ್ದಾರೆ.
ಆರಂಭದ ದಿನಗಳಲ್ಲಿ ಜನ ತಮ್ಮ ಮಾತು ಕೇಳುತ್ತಿರಲಿಲ್ಲ. ಈಗ ನಿಯಮ ಪಾಲಿಸುತ್ತಾರೆ. ಆದರೆ ಮುಂದಿನ ದಿನಗಳಲ್ಲಿ ತಾವು ಇದೇ ರೀತಿ ಕೆಲಸ ಮಾಡಲು ಆಗುತ್ತದೆಯೇ ಗೊತ್ತಿಲ್ಲ. ಹಾಗಾಗಿ ಕೆಲವೆಡೆ ಸಿಸಿಟಿವಿ ಅಳವಡಿಕೆಗೆ ಚಿಂತಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT