ಮೆಟ್ರೋ 
ಜಿಲ್ಲಾ ಸುದ್ದಿ

ಮೆಟ್ರೋ ಸಂಚಾರ-2 ಗಂಟೆ ಹೆಚ್ಚಳ

ಪೀಣ್ಯ ಹಾಗೂ ಸುತ್ತಮುತ್ತಲ ಕೈಗಾರಿಕಾ ಪ್ರದೇಶಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸಂಪಿಗೆ ರಸ್ತೆಯಿಂದ ನಾಗಸಂದ್ರದವರೆಗೆ ಮೆಟ್ರೋ ರೈಲಿನ ಸಂಚಾರ ಅವಧಿಯನ್ನು ಹೆಚ್ಚಿಸಲಾಗಿದೆ.

ಬೆಂಗಳೂರು: ಪೀಣ್ಯ ಹಾಗೂ ಸುತ್ತಮುತ್ತಲ ಕೈಗಾರಿಕಾ ಪ್ರದೇಶಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸಂಪಿಗೆ ರಸ್ತೆಯಿಂದ ನಾಗಸಂದ್ರದವರೆಗೆ ಮೆಟ್ರೋ ರೈಲಿನ ಸಂಚಾರ ಅವಧಿಯನ್ನು ಹೆಚ್ಚಿಸಲಾಗಿದೆ.
ಈ ನಿಟ್ಟಿನಲ್ಲಿ ಸಂಪಿಗೆ ರಸ್ತೆ- ನಾಗಸಂದ್ರ ನಡುವಿನ ಮಾರ್ಗದಲ್ಲಿ ಮಂಗಳವಾರದಿಂದ ನಮ್ಮ ಮೆಟ್ರೋ ರೈಲು ಬೆಳಿಗ್ಗೆ 5 ರಿಂದ ರಾತ್ರಿ 11 ರ ವರೆಗೆ ಸಂಚಾರ ಆರಂಭಿಸಿದೆ. ಈ ಭಾಗದಲ್ಲಿ ಸಂಚರಿಸುವ ಪ್ರಯಾಣಿಕರ ಮನವಿ ಹಿನ್ನೆಲೆಯಲ್ಲಿ ರೈಲು ಸೇವೆಯನ್ನು ಬೆಳಿಗ್ಗೆ ಹಾಗೂ ಸಂಜೆ ತಲಾ ಒಂದು ಗಂಟೆ ಕಾಲ, ಸೇರಿ ಒಟ್ಟು 2 ಗಂಟೆಗಳ ಕಾಲ ವಿಸ್ತರಣೆ ಮಾಡಲಾಗಿದೆ.
ಈ ಮಾರ್ಗ ಒಟ್ಟು 13 ಕಿ.ಮಿ ಉದ್ದ ಇದ್ದು ರೈಲು ಇಷ್ಟು ದಿನ ಬೆಳಿಗ್ಗೆ 6 ರಿಂದ ರಾತ್ರಿ 10 ವರೆಗೆ ರೈಲು ಸಂಚರಿಸುತ್ತಿತ್ತು. ಆದರೆ ಮೆಟ್ರೋ ರೈಲಿನ ಸೇವೆಯನ್ನು ಎರಡು ಗಂಟೆಗಳ ಕಾಲ ವಿಸ್ತರಣೆ ಡಿಸೆಂಬರ್ 1 ರಿಂದಲೇ ಜಾರಿಗೆ ಬರುವಂತೆ ಮಾಡಲಾಗಿದೆ.
ಬೆಳಿಗ್ಗೆ 5 ರಿಂದ 8 ಗಂಟೆಯವರೆಗೆ 15 ನಿಮಿಷಕ್ಕೊಂದು ರೈಲು ಬೆಳಿಗ್ಗೆ 8 ರಿಂದ ರಾತ್ರಿ 8 ವರೆಗೆ 10 ನಿಮಿಷಕ್ಕೊಂದು ಹಾಗೂ ರಾತ್ರಿ 8 ರಿಂದ ರಾತ್ರಿ 11 ಗಂಟೆವರೆಗೆ 15  ನಿಮಿಷಕ್ಕೊಂದು ರೈಲು ಸಂಚರಿಸಲಿವೆ.  ಇದರಿಂದ  ಪೀಣ್ಯ ಇಂಡಸ್ಟ್ರಿ, ಜಾಲಹಳ್ಳಿ ಕ್ರಾಸ್, ಟಿವಿಎಸ್ ಕ್ರಾಸ್, ಎನ್ ಟಿಟಿಎಫ್, ಪೀಣ್ಯ 2 ನೇ ಹಂತದ ನಿವಾಸಿಗಳಿಗೆ ಹೆಚ್ಚು ಉಪಯುಕ್ತವಾಗಲಿದೆ. ರೈಲಿನ ವೇಳಾಪಟ್ಟಿ ಬದಲಾಗಿರುವ ಬಗ್ಗೆ ಆ ಮಾರ್ಗದ ಎಲ್ಲಾ ನಿಲ್ದಾಣಗಳಲ್ಲೂ ಅಲ್ಲಲ್ಲಿ ಫ್ಲೆಕ್ಸ್ ಹಾಕೀ ಜನರಲ್ಲಿ ಅರಿವು ಮೂಡಿಸಲಾಗಿದೆ.
ಜನರ ಬೇಡಿಕೆ ಮೇರೆಗೆ ರೈಲುಗಳ ಅವಧಿಯನ್ನು ವಿಸ್ತರಿಸಿದ್ದು, ಮುಂದಿನ 2 ತಿಂಗಳುಗಳ ಕಾಲ ಪ್ರಯಾಣಿಕರ ಸಂಚಾರ ಗಮನಿಸಿ ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT