ಜಿಲ್ಲಾ ಸುದ್ದಿ

ದುಬಾರಿ ಕಾರಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

Manjula VN

ಬೆಂಗಳೂರು: ಚಾಮರಾಜಪೇಟೆ ವಾಲ್ಮೀಕಿ ನಗರದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಐಷಾರಾಮಿ ಫರ್ಚೂನರ್ ಕಾರಿಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಬುಧವಾರ
ನಸುಕಿನಲ್ಲಿ ಸಂಭವಿಸಿದೆ.

ಗುಜರಿ ವಸ್ತುಗಳ ಅಂಗಡಿಮಾಲೀಕರಾದ ಸೈಯ್ಯದ್ ಜಹೀರ್ ಅವರು ತಮ್ಮ ಮನೆ ಮುಂದೆ ಕಾರು ನಿಲ್ಲಿಸಿದ್ದರು. ಬೆಳಗ್ಗೆ 2 ಗಂಟೆ ಸುಮಾರಿಗೆ ಬಂದ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.

ಕಾರಿಗೆ ಬೆಂಕಿ ಹತ್ತಿರುವುದನ್ನು ಗಮನಿಸಿದ ಸ್ಥಳೀಯರು ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದರು. ಕೂಡಲೇ ನೀರು ಸುರಿದು ಬೆಂಕಿ ಆರಿಸಿದ್ದಾರೆ. ಕಾರಿನ ಮುಂಭಾಗ ಬೆಂಕಿಗೆ ಆಹುತಿಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

SCROLL FOR NEXT