ಬೆಂಗಳೂರಿನಲ್ಲಿ ಹಿರಿಯ ಪತ್ರಕರ್ತ ಟಿ.ಕೆ.ತ್ಯಾಗರಾಜ್ ಹಾಗೂ ಪಾರ್ವತಿ ಜಿ.ಐತಾಳ್ ಅವರಿಗೆ ಸಾಹಿತಿ ಡಾ.ಸಿದ್ದಲಿಂಗಯ್ಯ ಅವರು ದತ್ತಿ ಪ್ರಶಸ್ತಿ ಪ್ರದಾನ ಮಾಡಿದರು. ಕಸಾಪ ಆಡಳಿತಾಧಿಕಾರಿ 
ಜಿಲ್ಲಾ ಸುದ್ದಿ

ತಮಿಳುನಾಡು ಜನರ ಸಂಕಷ್ಟಕ್ಕೆ ನೆರವಾಗಿ: ಡಾ.ಸಿದ್ಧಲಿಂಗಯ್ಯ

ಭೀಕರ ಮಳೆಯಿಂದ ತತ್ತರಿಸಿರುವ ತಮಿಳುನಾಡಿನ ಜನರ ನೆರವಿಗೆ ಕನ್ನಡಿಗರು ಧಾವಿಸಬೇಕು...

ಬೆಂಗಳೂರು: ಭೀಕರ ಮಳೆಯಿಂದ ತತ್ತರಿಸಿರುವ ತಮಿಳುನಾಡಿನ ಜನರ ನೆರವಿಗೆ  ಕನ್ನಡಿಗರು ಧಾವಿಸಬೇಕು ಎಂದು ಸಾಹಿತಿ ಡಾ. ಸಿದ್ಧಲಿಂಗಯ್ಯ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಗುರುವಾರ ಆಯೋಜಿಸಿದ್ದ ವಸುದೇವ ಭೂಪಾಲಂ  ಹಾಗೂ  ವಿವಿಧ ದತ್ತಿ ಪ್ರಶಸ್ತಿ ಪ್ರದಾನದಲ್ಲಿ ಮಾತನಾಡಿದ  ತಮಿಳುನಾಡಿನ ಜನತೆ ತೀವ್ರ  ಸಂಕಷ್ಟದಲ್ಲಿದ್ದಾರೆ. ಇಂತಹ ಕಷ್ಟದ ಪರಿಸ್ಥಿತಿಯಲ್ಲಿ ಅವರಿಗೆ ಸಹಾಯಹಸ್ತ ಚಾಚಬೇಕು.  ಜೊತೆಗೆ ತಮಿಳುನಾಡಿನಲ್ಲಿ ರಾರು ಕನ್ನಡಿಗರು ಸಂಕಷ್ಟದಲ್ಲಿದ್ದಾರೆ.  ಹೀಗಾಗಿ ಸಂಕಷ್ಟದ  ರಾಜ್ಯದ ನೆರವಿಗೆ ಕನ್ನಡಿಗರು ಮುಂದಾಗಬೇಕು ಎಂದರು.

ದೇಶದಲ್ಲಿ ಹೆಚ್ಚು ಪ್ರಶಸ್ತಿಗಳನ್ನು ಪಡೆದಿರುವ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಅದೇ ರೀತಿ ಸಾವಿರಕ್ಕೂ ಹೆಚ್ಚು ವಿವಿಧ ದತ್ತಿ  ಪ್ರಶಸ್ತಿಯನ್ನು ಹೊಂದಿರುವ ಕೀರ್ತಿಗೆ ಕನ್ನಡ ಸಾಹಿತ್ಯ  ಪರಿಷತ್ತು ಪಾತ್ರವಾಗಿದೆ. ಸಾಹಿತ್ಯ ಪರಿಷತ್ತು ದತ್ತಿ ಪ್ರಶಸ್ತಿಗಳಿಗೆ ಆಯ್ಕೆ ಮಾಡಿದ ಕೃತಿಗಳನ್ನು  ಎಲ್ಲರೂ ಓದಬೇಕಾಗಿರುವಂತವು ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಕೆ.ಎ.ದಯಾನಂದ ಮಾತನಾಡಿ, ಯಾವುದೇ ಇಲಾಖೆ ಅಥವಾ ಕ್ಷೇತ್ರದಲ್ಲಿ ಕೆಲಸ ಮಾಡಿದರೂ, ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕೆಲಸ   ಮಾಡಿದಷ್ಟು ತೃಪ್ತಿ ಸಿಗುವುದಿಲ್ಲ. ಸಾಹಿತ್ಯ ಪರಿಷತ್ತಿನಲ್ಲಿ ಕೆಲಸ ಮಾಡಿದರೆ, ನಮ್ಮದು ಎಂಬ  ಭಾವನೆ ಮೂಡುತ್ತಿದೆ. ಈ ಹಿಂದೆ ತಮಗೆ ಕನ್ನಡ ಸಾಹಿತ್ಯ ಪರಿಷತ್ತಿನ ಒಳಗೆ ಹೋಗುವುದಕ್ಕೂ  ಭಯವಾಗುತ್ತಿತ್ತು. ಆದರೂ, ಕಡಿಮೆ ದರದಲ್ಲಿ ಸಿಗುತ್ತಿದ್ದ ಪುಸ್ತಕಗಳನ್ನು  ಖರೀದಿಸಲು ಬರುತ್ತಿದ್ದೆ ಎಂದು  ಅಂದಿನ ದಿನಗಳನ್ನು ಮೆಲುಕು ಹಾಕಿದರು.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT