ಜಿ. ಪರಮೇಶ್ವರ್ 
ಜಿಲ್ಲಾ ಸುದ್ದಿ

ಜೈಲು ಹಕ್ಕಿಗಳೊಂದಿಗೆ ಹಾಡಿ ನಲಿದ ಗೃಹ ಸಚಿವ!

ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಮೈಸೂರು ನಗರ ಕೇಂದ್ರ ಕಾರಾಗೃಹದ ಖೈದಿ ಕಲಾವಿದರೊಂದಿಗೆ ಹಾಡುವ ಮೂಲಕ ಜೈಲುವಾಸಿಗಳನ್ನು ...

ಮೈಸೂರು: ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಮೈಸೂರು ನಗರ ಕೇಂದ್ರ ಕಾರಾಗೃಹದ ಖೈದಿ ಕಲಾವಿದರೊಂದಿಗೆ ಹಾಡುವ ಮೂಲಕ ಜೈಲುವಾಸಿಗಳನ್ನು ರಂಜಿಸಿದರು.

ಕಾರಾಗೃಹ ಇಲಾಖೆಯ ವತಿಯಿಂದ ಕೇಂದ್ರ ಕಾರಾಗೃಹದ ಕವಾಯತು ಮೈದಾನದಲ್ಲಿ 43ನೇ ತಂಡದ ವೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪರಮೇಶ್ವರ್ ಭಾಗವಹಿಸಿದ್ದರು. ನಂತರ ಅವರು ಕಾರಾಗೃಹದ ಪರಿಶೀಲನೆಗೆ ತೆರಳಿದ್ದರು. ಆಗ, ಕೈದಿಗಳ ಮನಪರಿವರ್ತನೆಗೆ ಪೂರಕವಾಗುವ ಕಾರ್ಯಕ್ರಮಗಳನ್ನು ಜೈಲಿನಲ್ಲಿ ನಡೆಸುತ್ತಿರುವ ಕುರಿತು ಅಧಿಕಾರಿಗಳು ಗೃಹಸಚಿವರಿಗೆ ಮಾಹಿತಿ ನೀಡುತ್ತಿದ್ದರು.

ಖೈದಿಗಳೇ ಸೇರಿ ಕಟ್ಟಿಕೊಂಡಿರುವ 'ಪರಿವರ್ತನಾ ಮೆಲೋಡೀಸ್' ಆರ್ಕೆಸ್ಟ್ರಾ ತಂಡದವರು 'ಕರುನಾಡ ತಾಯಿ ಸದಾ ಚಿನ್ಮಯಿ' ಕನ್ನಡ ಚಲಚನಚಿತ್ರ ಗೀತೆಯನ್ನು ಹಾಡುತ್ತಿದ್ದರು. ಆ ಕಲಾವಿದರ ಬಯಕೆಯಂತೆ ಮೈಕ್ ಹಿಡಿದು ನಿಂತು 'ಕೈದಿ ಗಾಯಕ'ರೊಬ್ಬರ ಜತೆ ಚರಣ ಹಾಗೂ ಪಲ್ಲವಿಯನ್ನು ಸಚಿವರು ಹಾಡಿದರು. ಇದು ಕೈದಿಗಳು ಹಾಗೂ ಅಲ್ಲಿನ ಅಧಿಕಾರಿಗಳ ಮೆಚ್ಚುಗೆಗೆ ಪಾತ್ರವಾಯಿತು.

ತನ್ನೊಂದಿಗೆ ಹಾಡಿದ ಗಾಯಕ ಹಾಗೂ ವಾದ್ಯ ನುಡಿಸಿದ ಕಲಾವಿದರ ಬೆನ್ನು ತಟ್ಟಿದ ಗೃಹ ಸಚಿವರು, ಇಂಥ ರಚನಾತ್ಮಕ ಚಟುವಟಿಕೆಗಳನ್ನು ಮುಂದುವರಿಸುವಂತೆ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ