ಯು.ಟಿ.ಖಾದರ್ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ರಾಜ್ಯ ಸರ್ಕಾರಕ್ಕೆ ಕೇಂದ್ರ ಪ್ರಶಸ್ತಿ

ವಿಕಲಚೇತನರಿಗೆ ಹಾಗೂ ಕುಷ್ಠ ರೋಗಿಗಳಿಗೆ ಆರೈಕೆ ಮತ್ತು ಉದ್ಯೋಗ ನೀಡಿರುವ ಗಣನೀಯ ಸೇವೆಯನ್ನು ಪರಿಗಣಿಸಿ ಭಾರತ ಸರ್ಕಾರ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ರಾಷ್ಟ್ರ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದೆ...

ನವದೆಹಲಿ: ವಿಕಲಚೇತನರಿಗೆ ಹಾಗೂ ಕುಷ್ಠ ರೋಗಿಗಳಿಗೆ ಆರೈಕೆ ಮತ್ತು ಉದ್ಯೋಗ ನೀಡಿರುವ ಗಣನೀಯ ಸೇವೆಯನ್ನು ಪರಿಗಣಿಸಿ ಭಾರತ ಸರ್ಕಾರ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ರಾಷ್ಟ್ರ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದೆ.

ಗುರುವಾರ ಇಲಾಖೆ ಸಚಿವ ಯು.ಟಿ.ಖಾದರ್ ಕೇಂದ್ರ ಹಣಕಾಸು ಸಚಿವ ಅರುಣ್ ಜೆಟ್ಲಿ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ನಂತರ ಮಾತನಾಡಿದ ಸಚಿವ ಖಾದರ್, ಕರ್ನಾಟಕ ರಾಜ್ಯದಲ್ಲಿ ಕುಷ್ಠ ರೋಗಿಗಳಿಗೆ ಅತ್ಯುತ್ತಮ ಸೇವೆ, ವಿಕಲಚೇತನರಿಗೆ ಗಣನೀಯ ಸೇವೆ ಸಲ್ಲಿಸಲು ಎಲ್ಲ ನೆರವು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರೋಗ್ಯ ಇಲಾಖೆಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ, ವಿಕಲಚೇತನ , ಕುಷ್ಠ ರೋಗಿಗಳನ್ನು ಆರೈಕೆ ಮಾಡುತ್ತಿರುವ ಸರ್ಕಾರೇತರ ಸಂಸ್ಥೆಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪಡೆದ ಈ ರಾಷ್ಟ್ರ ಮಟ್ಟದ ಪ್ರಶಸ್ತಿಯನ್ನು ಈ ರಾಜ್ಯದ ವಿಕಲಚೇತನರಿಗೆ , ಕುಷ್ಠ ರೋಗಿಗಳಿಗೆ ಸಮರ್ಪಿಸುವುದಾಗಿ ಸಚಿವರು ತಿಳಿಸಿದರು. ಪ್ರಶಸ್ತಿಯೊಂದಿಗೆ ನೀಡಿದ ರು.1 ಲಕ್ಷ ನಗದು ಬಹುಮಾನವನ್ನು ರೋಗವನ್ನು ನಿರ್ಮೂಲನೆಗೊಳಿಸಲು ಸದ್ಬಳಕೆ ಮಾಡಿಕೊಳ್ಳಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

SCROLL FOR NEXT