ಸಚಿವೆ ಉಮಾಶ್ರೀ 
ಜಿಲ್ಲಾ ಸುದ್ದಿ

ಕಷ್ಟಪಟ್ಟು ಶ್ರಮವಹಿಸಿ ಸ್ವಾವಲಂಬಿ ಆಗಿ

ಮಹಿಳೆಯರು ಸ್ವಾವಲಂಬಿಗಳಾಗಬೇಕಾದರೆ ಕಷ್ಟಪಟ್ಟು ನಿರಂತರ ಶ್ರಮವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಉಮಾಶ್ರೀ ಹೇಳಿದರು...

ಬೆಂಗಳೂರು: ಮಹಿಳೆಯರು ಸ್ವಾವಲಂಬಿಗಳಾಗಬೇಕಾದರೆ ಕಷ್ಟಪಟ್ಟು ನಿರಂತರ ಶ್ರಮವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಉಮಾಶ್ರೀ ಹೇಳಿದರು.

ಚಿಂತಾಮಣಿಯ ನೂಪುರ ಫೈನ್ ಆಟ್ರ್ಸ್ ಅಕಾಡೆಮಿಯಿಂದ ಜಯನಗರದ ಖಾಸಗಿ ಕಾಲೇಜಿನಲ್ಲಿ ಏರ್ಪಡಿಸಿದ್ದ `ನೂಪುರ ಸಂಗಮ-2015' ಗಿನ್ನೆಸ್ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಂದು ಮಹಿಳೆಯರು ಸ್ವಾವಲಂಬಿಯಾಗಬೇಕೆನ್ನುವುದನ್ನು ಸವಾಲಾಗಿ ಸ್ವೀಕರಿಸಬೇಕು. ಆಗ ಮಾತ್ರ ಪುರುಷನಿಗೆ ಸರಿಸಮಾನರಾಗಿ ಮುಂದೆ ಬರಲು ಸಾಧ್ಯ. ಅಂತಹ ಕೆಲಸವನ್ನು ಅಕಾಡೆಮಿಯ ರೂಪಾ ಅವರು ಮಾಡಿದ್ದಾರೆ ಎಂದರು.

ಮಾಜಿ ಸಚಿವ ಬಸವರಾಜ ಹೊರಟ್ಟಿ ಮಾತನಾಡಿ, ಸರ್ಕಾರ ಮಾಡಬೇಕಾದ ಕೆಲಸವನ್ನು ಕಲಾವಿದರೂ ಮಾಡುತ್ತಿದ್ದು, ಅಂತಹವರಿಗೆ ಸರ್ಕಾರ ಹಾಗೂ ಸಂಸ್ಥೆಗಳು ಸಹಾಯಹಸ್ತ ನೀಡಬೇಕು ಎಂದರು. ಇದೇ ವೇಳೆ ಗಿನ್ನಿಸ್ ದಾಖಲೆಗೆ ಶ್ರಮಿಸಿದ ವಿವಿಧ ವರ್ಗದ 1500ಮಕ್ಕಳು, ಮಹಿಳೆಯರಿಗೆ ಪ್ರಶಸ್ತಿ ನೀಡಲಾಯಿತು. ದೂರದರ್ಶನ ವಾಹಿನಿಯ ಹೆಚ್ಚುವರಿ ನಿರ್ದೇಶಕ ಡಾ. ಮಹೇಶ್ ಜೋಶಿ ಇದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT