ಪ್ರೊ.ಚಂಪಾ ಅವರು ಕೆಲ ದಿನಗಳ ಹಿಂದೆ ಭಾಗವಹಿಸಿದ್ದ ಕಾರ್ಯಕ್ರಮ(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಬ್ರಾಹ್ಮಣರು ದೇಶ ಬಿಡಲೆಂದು ಹೇಳಿಲ್ಲ: ಚಂಪಾ

ದೇಶ ಬಿಡಬೇಕೆಂದು ನಾನು ಹೇಳಿಲ್ಲ. ಯಾರು ದೇಶ ಬಿಡಬೇಕಾದ ಅಗತ್ಯವೂ ಇಲ್ಲ. ಎಲ್ಲರೂ ಇಲ್ಲೇ ಇದ್ದು ಒಗ್ಗಟ್ಟಿನಿಂದ...

ಬೆಂಗಳೂರು: ದೇಶ ಬಿಡಬೇಕೆಂದು ನಾನು ಹೇಳಿಲ್ಲ. ಯಾರು ದೇಶ ಬಿಡಬೇಕಾದ  ಅಗತ್ಯವೂ ಇಲ್ಲ. ಎಲ್ಲರೂ ಇಲ್ಲೇ ಇದ್ದು ಒಗ್ಗಟ್ಟಿನಿಂದ ಎಲ್ಲರೂ ಸಹಬಾಳ್ವೆಯಿಂದ ಜೀವನ  ಮಾಡೋಣ ಎಂದು ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ  ಹೇಳಿದರು.

ಕರ್ನಾಟಕ ಸುಗಮ ಸಂಗೀತ ಪರಿಷತ್ ಪ್ರತಿಭಾ ಶಿಕ್ಷಣ ಸಮಿತಿ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ `ಕವಿಯ ನೋಡಿ-ಕವಿತೆ ಕೇಳಿ' ಸರಣಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭೂಮಿಯಲ್ಲಿ ಯಾವುದೂ ಶಾಶ್ವತ ಅಲ್ಲ. ಇರುವಷ್ಟು ದಿನ ಅರ್ಥಪೂರ್ಣ ಬದುಕು ನಡೆಸುವ  ಅಗತ್ಯವಿದೆ ಎಂದರು.

ಕಾವ್ಯದ ಒಳ ಹೊಕ್ಕು ಗೀತೆ ಅರಳಿಸುವವರು ಸೃಜನಶೀಲ ಗಾಯಕರು. ಕಾವ್ಯ ಎಂಬುದು ಜೀವ ಬೀಜಗಳ ಸರಮಾಲೆ. ಕವಿಗಳು ಶಬ್ಧಗಳಿಗೆ ಜೀವ ತುಂಬವ ಕೆಲಸ ಮಾಡುತ್ತಾರೆ. ಆದರೆ, ಸೃಜನಶೀಲ ಗಾಯಕರು ಅದರ ಒಳ ಹೊಕ್ಕಿ ಅನಾವರಣ ಮಾಡುತ್ತಾರೆ. ಸಿ.ಅಶ್ವತ್,  ಕಿಕ್ಕೇರಿ, ಡಾ. ಕಿಕ್ಕೇರಿ ಕೃಷ್ಣಮೂರ್ತಿ ಮೊದಲಾದ ಸೃಜನಶೀಲ ಗಾಯಕರು ಇದಕ್ಕೊಂದು ಸೂಕ್ತ  ನಿದರ್ಶನ. ಹೀಗಾಗಿ ಈ ಸೃಜನಶೀಲ ಗಾಯಕರ ಪರಂಪರೆ ಮುಂದಿನ ಪೀಳಿಗೆಗೂ ಹರಿಯಬೇಕೆಂದು ಆಶಿಸಿದರು.

ರಾಷ್ಟ್ರಕವಿ ಕುವೆಂಪು ಅವರ ನಾಡ ಗೀತೆ ಕುರಿತು ಸುಮತೀಂದ್ರ ನಾಡಿಗರು ನೀಡಿರುವ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ ಅಷ್ಟೆ. ಈ ಬಗ್ಗೆ ಯಾರು ತಲೆ ಕೆಡಿಸಿಕೊಳ್ಳಬಾರದು. ನಾಡಿಗರ ವಿರುದ್ಧ ಯಾವುದೇ ರೀತಿಯ ಹಿಂಸಾತ್ಮಕ ಕೆಲಸಗಳಿಗೆ ಮುಂದಾಗಬಾರದೆಂದು  ಅವರು ಮನವಿ ಮಾಡಿದರು.

ಇದೇ ವೇಳೆ ಡಾ.ಕಿಕ್ಕೇರಿ ಕೃಷ್ಣಮೂರ್ತಿ, ಶ್ವೇತಾ ಪ್ರಭು, ಪ್ರಿಯಾಂಕಾ ಸೂರ್ಯ ನಾರಾಯಣ್  ಮೃತ್ಯುಂಜಯ ದೊಡ್ಡವಾಡ, ಪಂಚಮ್ ಹಳಿಬಂಡಿ ಮೊದಲಾದ ಗಾಯಕರು ಚಂಪಾ ರಚನೆಯ  ಹಲವು ಕವನಗಳನ್ನು ಸುಶ್ರಾವ್ಯವಾಗಿ ಹಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT