ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಅಸಹಿಷ್ಣುತೆ ಯಾರಿಂದ ಆದರೂ ತಪ್ಪೇ: ಪೇಜಾವರ ಶ್ರೀ

``ಅಸಹಿಷ್ಣುತೆ ನಡವಳಿಕೆ ಯಾರಿಂದಲೇ ಆದರೂ ಅದು ಖಂಡನೀಯ. ಈ ವಿಚಾರದಲ್ಲಿ ಎಲ್ಲ ಧರ್ಮೀಯರ ನಡೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು. ನಾಡಿನ ಬುದ್ಧಿ ಜೀವಿಗಳು ಅಷ್ಟರ ಮಟ್ಟಿಗೆ ಜಾತ್ಯತೀತ ನಿಲುವು ಪ್ರದರ್ಶಿಸಲಿ,''...

ಬಾಗಲಕೋಟೆ: ``ಅಸಹಿಷ್ಣುತೆ ನಡವಳಿಕೆ ಯಾರಿಂದಲೇ ಆದರೂ ಅದು ಖಂಡನೀಯ. ಈ ವಿಚಾರದಲ್ಲಿ ಎಲ್ಲ ಧರ್ಮೀಯರ ನಡೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು. ನಾಡಿನ ಬುದ್ಧಿ ಜೀವಿಗಳು ಅಷ್ಟರ ಮಟ್ಟಿಗೆ ಜಾತ್ಯತೀತ ನಿಲುವು ಪ್ರದರ್ಶಿಸಲಿ,'' ಎಂದು ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಸಲಹೆ ನೀಡಿದ್ದಾರೆ.

ಭಾನುವಾರ ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ``ಹಿಂದುಗಳು ಅಸಹಿಷ್ಣುತೆ ವಾತಾವರಣ ಸೃಷ್ಟಿಸುತ್ತಿದ್ದಾರೆಂಬ ವಾದ ಮಂಡಿಸಿ ಪ್ರತಿಭಟಿಸುವ ದನಿಗಳು ವ್ಯಾಪಕಗೊಳ್ಳುತ್ತಿವೆ. ಈ ತರಹದ ನಡವಳಿಕೆಗಳು ತರವಲ್ಲ. ಅಸಹಿಷ್ಣುತೆ ವ್ಯಕ್ತಪಡಿಸುವ ಎಲ್ಲ ಧರ್ಮ ಹಾಗೂ ನೆಲೆಗಳನ್ನು ಖಂಡಿಸುವ ಮನೋಭಾವ ಗೋಚರಿಸಲಿ,'' ಎಂದರು

``ಬ್ರಾಹ್ಮಣರು ದೇಶ ಬಿಟ್ಟು ಹೋಗಬೇಕೆಂಬ ಸಾಹಿತಿ ಪ್ರೊ. ಚಂಪಾ ಹೇಳಿಕೆಯಲ್ಲಿ ಗಂಭೀರತೆಗಿಂತ ಹಾಸ್ಯವಿದೆ. ಹೀಗಾಗಿ ಹೇಳಿಕೆ ವಾಪಸು ಪಡೆಯುವಂತೆ ಅವರನ್ನು ಆಗ್ರಹಿಸಲಾರೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗಲೇ ಹಲವು ರಾಜ್ಯಗಳಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದಿದೆ. ಗೋಹತ್ಯೆ ನಿಷೇಧ ರಾಷ್ಟ್ರೀಯ ನೀತಿಯಾಗಬೇಕು. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗಬೇಕು. ಇದು ಪಕ್ಷಾತೀತವಾಗಿ ನಡೆಯಬೇಕಾದ ಕೆಲಸ,'' ಎಂದೂ ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್