ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಅಸಹಿಷ್ಣುತೆ ಯಾರಿಂದ ಆದರೂ ತಪ್ಪೇ: ಪೇಜಾವರ ಶ್ರೀ

``ಅಸಹಿಷ್ಣುತೆ ನಡವಳಿಕೆ ಯಾರಿಂದಲೇ ಆದರೂ ಅದು ಖಂಡನೀಯ. ಈ ವಿಚಾರದಲ್ಲಿ ಎಲ್ಲ ಧರ್ಮೀಯರ ನಡೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು. ನಾಡಿನ ಬುದ್ಧಿ ಜೀವಿಗಳು ಅಷ್ಟರ ಮಟ್ಟಿಗೆ ಜಾತ್ಯತೀತ ನಿಲುವು ಪ್ರದರ್ಶಿಸಲಿ,''...

ಬಾಗಲಕೋಟೆ: ``ಅಸಹಿಷ್ಣುತೆ ನಡವಳಿಕೆ ಯಾರಿಂದಲೇ ಆದರೂ ಅದು ಖಂಡನೀಯ. ಈ ವಿಚಾರದಲ್ಲಿ ಎಲ್ಲ ಧರ್ಮೀಯರ ನಡೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು. ನಾಡಿನ ಬುದ್ಧಿ ಜೀವಿಗಳು ಅಷ್ಟರ ಮಟ್ಟಿಗೆ ಜಾತ್ಯತೀತ ನಿಲುವು ಪ್ರದರ್ಶಿಸಲಿ,'' ಎಂದು ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಸಲಹೆ ನೀಡಿದ್ದಾರೆ.

ಭಾನುವಾರ ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ``ಹಿಂದುಗಳು ಅಸಹಿಷ್ಣುತೆ ವಾತಾವರಣ ಸೃಷ್ಟಿಸುತ್ತಿದ್ದಾರೆಂಬ ವಾದ ಮಂಡಿಸಿ ಪ್ರತಿಭಟಿಸುವ ದನಿಗಳು ವ್ಯಾಪಕಗೊಳ್ಳುತ್ತಿವೆ. ಈ ತರಹದ ನಡವಳಿಕೆಗಳು ತರವಲ್ಲ. ಅಸಹಿಷ್ಣುತೆ ವ್ಯಕ್ತಪಡಿಸುವ ಎಲ್ಲ ಧರ್ಮ ಹಾಗೂ ನೆಲೆಗಳನ್ನು ಖಂಡಿಸುವ ಮನೋಭಾವ ಗೋಚರಿಸಲಿ,'' ಎಂದರು

``ಬ್ರಾಹ್ಮಣರು ದೇಶ ಬಿಟ್ಟು ಹೋಗಬೇಕೆಂಬ ಸಾಹಿತಿ ಪ್ರೊ. ಚಂಪಾ ಹೇಳಿಕೆಯಲ್ಲಿ ಗಂಭೀರತೆಗಿಂತ ಹಾಸ್ಯವಿದೆ. ಹೀಗಾಗಿ ಹೇಳಿಕೆ ವಾಪಸು ಪಡೆಯುವಂತೆ ಅವರನ್ನು ಆಗ್ರಹಿಸಲಾರೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗಲೇ ಹಲವು ರಾಜ್ಯಗಳಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದಿದೆ. ಗೋಹತ್ಯೆ ನಿಷೇಧ ರಾಷ್ಟ್ರೀಯ ನೀತಿಯಾಗಬೇಕು. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗಬೇಕು. ಇದು ಪಕ್ಷಾತೀತವಾಗಿ ನಡೆಯಬೇಕಾದ ಕೆಲಸ,'' ಎಂದೂ ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT