(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

5 ಸಾವಿರ ಕೆರೆಗಳ ಪುನಶ್ಚೇತನಕ್ಕೆ ಯೋಜನೆ

ಜಲಸಂವರ್ಧನಾ ಯೋಜನೆಯನ್ನು ಮತ್ತೆ ಆರಂಭಿಸುವುದಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ವಿಶ್ವ ಬ್ಯಾಂಕ್ ನೆರವಿನಲ್ಲಿ 5,000 ಕೆರೆಗಳನ್ನು ಪುನರುಜ್ಜೀವನಗೊಳಿಸುವುದಕ್ಕೆ ನೀಲನಕ್ಷೆ ಸಿದ್ಧಪಡಿಸಲಾಗಿದೆ...

ಬೆಂಗಳೂರು: ಜಲಸಂವರ್ಧನಾ ಯೋಜನೆಯನ್ನು ಮತ್ತೆ ಆರಂಭಿಸುವುದಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ವಿಶ್ವ ಬ್ಯಾಂಕ್ ನೆರವಿನಲ್ಲಿ 5,000 ಕೆರೆಗಳನ್ನು ಪುನರುಜ್ಜೀವನಗೊಳಿಸುವು ದಕ್ಕೆ ನೀಲನಕ್ಷೆ ಸಿದ್ಧಪಡಿಸಲಾಗಿದೆ.

ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧೀಕಾರದ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಣ್ಣ ನೀರಾವರಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, 2001ರಿಂದ 2012ರ ಅವಧೀಯಲ್ಲಿ ಜಾರಿಯಲ್ಲಿದ್ದ ಜಲ ಸಂವರ್ಧನಾ ಯೋಜನೆ ಶೇ.95 ರಷ್ಟು ಯಶಸ್ಸು ಕಂಡಿದೆ. ಹೀಗಾಗಿ ಸಮುದಾಯ ಸಹಭಾಗಿತ್ವದಲ್ಲಿ ಈ ಯೋಜನೆಯನ್ನು ಮತ್ತೆ ಜಾರಿಗೆ ತರಲು ಸಿದ್ಧತೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

ವಿಶ್ವಬ್ಯಾಂಕ್ ನೆರವಿಗೆ ನಿರ್ಧಾರ: ಒಟ್ಟು ರು.2,500 ಕೋಟಿ ಧನ ಸಹಾಯವನ್ನು ವಿಶ್ವ ಬ್ಯಾಂಕ್ ಅಥವಾ ಜೈಕಾದಿಂದ ಪಡೆಯಲು ನಿರ್ಧರಿಸಲಾಗಿದೆ. ಇದಕ್ಕೆ ಸಂಪುಟ ಸಭೆಯ ಅನುಮೋದನೆ ಅಗತ್ಯವಾಗಿದೆ. 2001ರಿಂದ 2012ರ ಅವಧಿಯಲ್ಲಿ ರು.815 ಕೋಟಿಯನ್ನು ಈ ಯೋಜನೆಗೆ ನಿಗದಿಪಡಿಸಲಾಗಿದ್ದು, ರು.795 ಕೋಟಿ ಖರ್ಚಾಗಿದೆ. 18 ಜಿಲ್ಲೆಗಳಲ್ಲಿ 3,710 ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದೆ.

ಯೋಜನೆ ಪುನಾರಂಭಗೊಂಡರೆ ಪ್ರತಿ ವರ್ಷ ಸಾವಿರ ಕೆರೆಯಂತೆ 5,000 ಕೆರೆ ಅಭಿವೃದ್ಧಿಪಡಿಸಲು ನಿರ್ಧಾರ ತೆಗೆದುಕ್ಳೊಲಾಗಿದೆ ಎಂದು ತಿಳಿಸಿದರು. ಕೆರೆ ಅಭಿವೃದ್ಧಿ ಪ್ರಾಧೀಕಾರದಿಂದ ಉತ್ತರ ಮತ್ತು ದಕ್ಷಿಣ ಕರ್ನಾಟಕದಲ್ಲಿ 2,259 ಕೆರೆಗಳ ಒತ್ತುವರಿ ತೆರವುಗೊಳಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT