(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಕೇಂದ್ರ ಸರ್ಕಾರದ ಸಮಗ್ರ ಆರೋಗ್ಯ ಯೋಜನೆ ಇಎಸ್‍ಐನಲ್ಲಿ ಚುರುಕು

ಕೇಂದ್ರ ಸರ್ಕಾರದ ಸಮಗ್ರ ಆರೋಗ್ಯ ಸುಧಾರಣಾ ನೀತಿ ಯೋಜನೆಗಳನ್ನು ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಇಎಸ್‍ಐ ಕಾರ್ಯನಿರ್ವಹಿಸುತ್ತಿದೆ...

ಬೆಂಗಳೂರು: ಕೇಂದ್ರ ಸರ್ಕಾರದ ಸಮಗ್ರ ಆರೋಗ್ಯ ಸುಧಾರಣಾ ನೀತಿ ಯೋಜನೆಗಳನ್ನು ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಇಎಸ್‍ಐ ಕಾರ್ಯನಿರ್ವಹಿಸುತ್ತಿದೆ.

ರೋಗಿಗಳಿಗೆ ತೊಂದರೆಯಾಗದಂತೆ ಪ್ರತಿದಿನ ಹೊದಿಕೆಗಳನ್ನು ಬದಲಾಯಿಸುವ ಸಲುವಾಗಿ `ಕಾಮನ ಬಿಲ್ಲು' ಬಣ್ಣದ ಹೊದಿಕೆಗಳನ್ನು ಉಪಯೋಗಿಸಲಾಗುತ್ತಿದೆ. ಇದರಿಂದ ರೋಗಿಗಳಿಗೆ ದಿನಕ್ಕೊಂದು ಬಣ್ಣದ ಹೊದಿಕೆ ವಿತರಿಸುತ್ತಿದ್ದು, ಆಸ್ಪತ್ರೆ ವಾತಾವರಣ ಸ್ವಚ್ಛಂದವಾಗಿದೆ. ರೋಗಿಗಳ ಅನುಕೂಲಕ್ಕಾಗಿ ಆಸ್ಪತ್ರೆಗೆ ದಿನವಿಡೀ ಕೆಲಸ ಮಾಡುವ ಸಹಾಯವಾಣಿ ಕೂಡ ಫಲಾನುಭವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ.

ಇತ್ತೀಚೆಗಷ್ಟೇ ಹಿರಿಯ ನಾಗರಿಕರಿಗೆ ಮತ್ತು ಅಂಗವಿಕಲರಿಗಾಗಿ ವಿಶೇಷ ಹೊರರೋಗಿ ವಿಭಾಗ ತೆರೆಯಲಾಗಿದೆ. ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆ ಇರುವ ರೋಗಿಗಳು ಚಿಕಿತ್ಸೆ ಪಡೆದುಕೊಳ್ಳಬಹುದು. ಇದಲ್ಲದೆ ಅಸ್ತಮಾ ರೋಗಿಗಳಿಗಾಗಿ ವಿಶೇಷ ವ್ಯವಸ್ಥೆ, ಕ್ಯಾನ್ಸರ್ ಪತ್ತೆ ವಿಭಾಗವನ್ನು ಸಹ ಪ್ರಾರಂಭಿಸಲಾಗಿದೆ.

ಇನ್ನೂ ಹೆಚ್ಚಿನ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವವರಿಗಾಗಿ ಡಯಾಲಿಸಿಸ್ ಘಟಕ ಆರಂಭಿಸಲು ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಆಸ್ಪತ್ರೆಯ ಎಲ್ಲ ನಿಬಂಧನೆಗಳನ್ನು ಪಾಲಿಸುವ ನಿಟ್ಟಿನಲ್ಲಿ ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದೆ ಎಂದು ಪೀಣ್ಯ ಇಎಸ್‍ಐ ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Parliament special session: ಕ್ಷೇತ್ರ ಪುನರ್ವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆ ಮಂಡನೆ; ವಿರೋಧ ಪಕ್ಷಗಳ ತೀವ್ರ ವಿರೋಧ

ನಾಳೆ ರಾಜ್ಯಸಭೆ ಉಪಸಭಾಪತಿ ಚುನಾವಣೆ, ವಿಪಕ್ಷಗಳ ಬಹಿಷ್ಕಾರ: ಮೂರು ಕಾರಣ ಕೊಟ್ಟ ಜೈರಾಮ್ ರಮೇಶ್!

ಕ್ಷೇತ್ರ ಪುನರ್ವಿಂಗಡಣೆ ಕುರಿತು ವದಂತಿಗಳ ಹರಡದಿರಿ: ವಿಪಕ್ಷಗಳಿಗೆ ಕಿರಣ್ ರಿಜಿಜು ಮನವಿ

ಇರಾನ್ ವಿರುದ್ಧ ಪ್ರತೀಕಾರ: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ; ಜಾಗತಿಕ ಮಾರುಕಟ್ಟೆಗೆ ಶಾಕ್, ಭಾರತದ ಮೇಲೂ ಪರಿಣಾಮ ಸಾಧ್ಯತೆ..!

ಹಾರ್ಮುಜ್ ಜಲಸಂಧಿ ದಿಗ್ಬಂಧನ: ಹಿಂದೆ ಸರಿಯದಿದ್ದರೆ ಗಲ್ಪ್ ವ್ಯಾಪಾರ ಸಂಪೂರ್ಣ ಅಸ್ತವ್ಯಸ್ತ; ಅಮೆರಿಕಾಗೆ ಇರಾನ್ ಖಡಕ್ ಎಚ್ಚರಿಕೆ..!

SCROLL FOR NEXT