(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಕೇಂದ್ರ ಸರ್ಕಾರದ ಸಮಗ್ರ ಆರೋಗ್ಯ ಯೋಜನೆ ಇಎಸ್‍ಐನಲ್ಲಿ ಚುರುಕು

ಕೇಂದ್ರ ಸರ್ಕಾರದ ಸಮಗ್ರ ಆರೋಗ್ಯ ಸುಧಾರಣಾ ನೀತಿ ಯೋಜನೆಗಳನ್ನು ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಇಎಸ್‍ಐ ಕಾರ್ಯನಿರ್ವಹಿಸುತ್ತಿದೆ...

ಬೆಂಗಳೂರು: ಕೇಂದ್ರ ಸರ್ಕಾರದ ಸಮಗ್ರ ಆರೋಗ್ಯ ಸುಧಾರಣಾ ನೀತಿ ಯೋಜನೆಗಳನ್ನು ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಇಎಸ್‍ಐ ಕಾರ್ಯನಿರ್ವಹಿಸುತ್ತಿದೆ.

ರೋಗಿಗಳಿಗೆ ತೊಂದರೆಯಾಗದಂತೆ ಪ್ರತಿದಿನ ಹೊದಿಕೆಗಳನ್ನು ಬದಲಾಯಿಸುವ ಸಲುವಾಗಿ `ಕಾಮನ ಬಿಲ್ಲು' ಬಣ್ಣದ ಹೊದಿಕೆಗಳನ್ನು ಉಪಯೋಗಿಸಲಾಗುತ್ತಿದೆ. ಇದರಿಂದ ರೋಗಿಗಳಿಗೆ ದಿನಕ್ಕೊಂದು ಬಣ್ಣದ ಹೊದಿಕೆ ವಿತರಿಸುತ್ತಿದ್ದು, ಆಸ್ಪತ್ರೆ ವಾತಾವರಣ ಸ್ವಚ್ಛಂದವಾಗಿದೆ. ರೋಗಿಗಳ ಅನುಕೂಲಕ್ಕಾಗಿ ಆಸ್ಪತ್ರೆಗೆ ದಿನವಿಡೀ ಕೆಲಸ ಮಾಡುವ ಸಹಾಯವಾಣಿ ಕೂಡ ಫಲಾನುಭವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ.

ಇತ್ತೀಚೆಗಷ್ಟೇ ಹಿರಿಯ ನಾಗರಿಕರಿಗೆ ಮತ್ತು ಅಂಗವಿಕಲರಿಗಾಗಿ ವಿಶೇಷ ಹೊರರೋಗಿ ವಿಭಾಗ ತೆರೆಯಲಾಗಿದೆ. ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆ ಇರುವ ರೋಗಿಗಳು ಚಿಕಿತ್ಸೆ ಪಡೆದುಕೊಳ್ಳಬಹುದು. ಇದಲ್ಲದೆ ಅಸ್ತಮಾ ರೋಗಿಗಳಿಗಾಗಿ ವಿಶೇಷ ವ್ಯವಸ್ಥೆ, ಕ್ಯಾನ್ಸರ್ ಪತ್ತೆ ವಿಭಾಗವನ್ನು ಸಹ ಪ್ರಾರಂಭಿಸಲಾಗಿದೆ.

ಇನ್ನೂ ಹೆಚ್ಚಿನ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವವರಿಗಾಗಿ ಡಯಾಲಿಸಿಸ್ ಘಟಕ ಆರಂಭಿಸಲು ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಆಸ್ಪತ್ರೆಯ ಎಲ್ಲ ನಿಬಂಧನೆಗಳನ್ನು ಪಾಲಿಸುವ ನಿಟ್ಟಿನಲ್ಲಿ ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದೆ ಎಂದು ಪೀಣ್ಯ ಇಎಸ್‍ಐ ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ