(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಸ್ತ್ರೀಯರಿಗೆ ಕಾನೂನು ಅರಿವು ಅಗತ್ಯ

ಇತ್ತೀಚಿನ ದಿನಗಳಲ್ಲಿ ಉದ್ಯೋಗಸ್ಥ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ, ಅತ್ಯಾಚಾರ, ದೌರ್ಜನ್ಯದಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಾನೂನು ಬಳಕೆ ಕುರಿತು ಮಹಿಳೆಯರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕಿದೆ ಎಂದು 9ನೇ ಎಸಿಎಂಎಂ ನ್ಯಾಯಾಲಯದ...

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಉದ್ಯೋಗಸ್ಥ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ, ಅತ್ಯಾಚಾರ, ದೌರ್ಜನ್ಯದಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಾನೂನು ಬಳಕೆ ಕುರಿತು ಮಹಿಳೆಯರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕಿದೆ ಎಂದು 9ನೇ ಎಸಿಎಂಎಂ ನ್ಯಾಯಾಲಯದ ನ್ಯಾ.ವಿಜಯಾನಂದ ಅಭಿಪ್ರಾಯಪಟ್ಟರು.

ಪೊಲೀಸ್ ಇಲಾಖೆಯಿಂದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಡಾ.ಪ್ರಭಾಕರ್ ಕೋರೆ ಕನ್ವೆನ್ಷನ್ ಸೆಂಟರ್‍ನಲ್ಲಿ ಗುರುವಾರ ಉದ್ಯೋಗಸ್ಥ ಮಹಿಳೆಯರ ಸಮಸ್ಯೆಗಳ ಕುರಿತು
ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯೋಜನಾ ನಿರ್ದೇಶಕಿ ಶಶಿಕಲಾ ಯು.ಶೆಟ್ಟಿ ಮಾತನಾಡಿ, ಆ್ಯಸಿಡ್ ದಾಳಿಗೆ ಒಳಗಾದ ಮಹಿಳೆಯರಿಗೆ ಸರ್ಕಾರ ರು.3 ಲಕ್ಷದವರೆಗೆ ಪರಿಹಾರ ನೀಡಲಾಗುವುದು. ನೊಂದ ಮಹಿಳೆಗೆ ವಾಸಿಸಲು ಸ್ಥಳಾವಕಾಶ, ಆರೋಗ್ಯ ಕಾಪಾಡಿಕೊಳ್ಳಲು ನೆರವು ಹಾಗೂ ಉಚಿತ ಕಾನೂನು ನೆರವುಒದಗಿಸಲಾಗುವುದು.

ಅಂತೆಯೇ  ಕೆ.ಸಿ.ಆಸ್ಪತ್ರೆ, ಬೌರಿಂಗ್ ಆಸ್ಪತ್ರೆ ಹಾಗೂ ವಾಣಿ ವಿಲಾಸ ಆಸ್ಪತ್ರೆಗಳಲ್ಲಿ ವಿಶೇಷ ಚಿಕಿತ್ಸಾ ಘಟಕಗಳು ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಚಿತ್ರನಟಿ ಸುಧಾರಾಣಿ, 3ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾ„ೀಶರಾದ ಲಾವಣ್ಯ, 5ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ರಂಗೇಗೌಡ , ಉಪ ಪೊಲೀಸ್ ಆಯುಕ್ತ
ಟಿ.ಆರ್.ಸುರೇಶ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT