ಮದುವೆಗೆ ಸಿಂಗಾರಗೊಂಡಿದ್ದ ಹೆಣ್ಣು ಕರು 
ಜಿಲ್ಲಾ ಸುದ್ದಿ

ಸತ್ತ ಮಗನ ಆಸೆ ಪೂರೈಸಲು ಎತ್ತು-ಕರುವಿಗೆ ಮದುವೆ ಮಾಡಿಸಿದ ಪೋಷಕರು!

ಸತ್ತ ಮಗನ ಆಸೆ ಪೂರೈಸಲು ಮುಂದಾದ ಪೋಷಕರು, ಎತ್ತು ಹಾಗೂ ಹಸುವಿನ ಕರುವಿಗೆ ವಿವಾಹ ಮಾಡಿಸಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲಿ ನಡೆದಿದೆ. ..

ಚನ್ನರಾಯಪಟ್ಟಣ: ವಯಸ್ಸಿಗೆ ಬಂದ ಮಗ ಅಕಾಲಿಕ ಮರಣಕ್ಕೀಡಾಗಿ ಪ್ರತಿದಿನ ಕನಸಿನಲ್ಲಿ ಬಂದು ಮದುವೆ ಮಾಡುವಂತೆ ಕಾಡುತ್ತಿದ್ದ. ಮಗನ ಆಸೆ ಪೂರೈಸಲು ಮುಂದಾದ ಪೋಷಕರು, ಎತ್ತು ಹಾಗೂ ಹಸುವಿನ ಕರುವಿಗೆ ವಿವಾಹ ಮಾಡಿಸಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲಿ ನಡೆದಿದೆ.

ಹೊಸಹಳ್ಳಿ ಗ್ರಾಮದ ರಂಗೇಗೌಡ ಹಾಗೂ ಭಾಗ್ಯಮ್ಮ ದಂಪತಿ ಮಗ ಸಂತೋಷ್‌, 6 ವರ್ಷಗಳ ಹಿಂದೆ ಸಾವಿಗೀಡಾಗಿದ್ದ. ಆ ವೇಳೆ, ಆತನಿಗೆ ಮದುವೆಗಾಗಿ ಹೆಣ್ಣು ಹುಡುಕಲಾಗುತ್ತಿತ್ತು. ಸತ್ತ ಮಗ ಕನಸಿನಲ್ಲಿ ಬಂದು, ದಯಮಾಡಿ ನನ್ನ ಮದುವೆ ಮಾಡಿಸಿ. ನಾನು ಸತ್ತಿರುವುದರಿಂದ ನನ್ನ ಬದಲಿಗೆ ಒಂದು ಎತ್ತು ಹಾಗೂ ಒಂದು ಹಸು ಕರುವಿನ ಜೊತೆ ಮದುವೆ ಮಾಡಿಸಿ. ಅದರಲ್ಲಿ ನಾನಿರುತ್ತೇನೆ' ಎಂದು ಕಾಡುತ್ತಿದ್ದನಂತೆ. ಮೃತ ಮಗನ ಆಸೆ ಪೂರೈಸಿದ ಸಂತೋಷದಲ್ಲಿರುವ ಪೋಷಕರು ಶುಕ್ರವಾರ ಬೀಗರ ಊಟ ಇಟ್ಟುಕೊಂಡಿದ್ದಾರೆ.

ಕರುವನ್ನು ವರ ಮತ್ತು ವಧುವಿನ ರೀತಿ ಶೃಂಗರಿಸಿ ಗುರುವಾರ ಅದ್ಧೂರಿಯಾಗಿ ಮದುವೆ ಮಾಡಿದರು. ಪಶುಗಳ ಈ ಮಾಂಗಲ್ಯ ಧಾರಣೆ ಮುಹೂರ್ತಕ್ಕೆ ಸುಮಾರು 1 ಸಾವಿರ ಜನ ಬಂದು, ನೂತನ ವಧು-ವರರನ್ನು ಹಾರೈಸಿದರು. ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಈ ಮದುವೆಗಾಗಿ ಚಪ್ಪರ ಹಾಕಲಾಗಿತ್ತು.

ಎತ್ತಿಗೆ ಸಂತೋಷ್‌ ಎಂದು, ಹಸುವಿನ ಕರುವಿಗೆ ಸುಧಾರಾಣಿ ಎಂದು ಹೆಸರು ಇಡಲಾಗಿತ್ತು. ಎತ್ತಿಗೆ ವರನ ತರಹ ಶೃಂಗಾರ ಮಾಡಿ, ಹೊಸಹಳ್ಳಿಯಿಂದ ಗುಳ್ಳೇನಹಳ್ಳಿಗೆ ವಾದ್ಯಗಳೊಂದಿಗೆ ಮೆರವಣಿಗೆಯಲ್ಲಿ ಕರೆತರಲಾಯಿತು. ಇದೇ ವೇಳೆ, ಗುಳ್ಳೇನಹಳ್ಳಿ ಗ್ರಾಮದ ಹಸುವಿನ ಕರುವಿನ ಕಿವಿಗೆ ಚಿನ್ನದ ಓಲೆ, ಜುಮುಕಿ, ಕಾಲಿಗೆ ಬಳೆ, ಕಾಲುಂಗುರ, ಗೆಜ್ಜೆ ಕಟ್ಟಿ ಸಿಂಗರಿಸಲಾಗಿತ್ತು. ನಂತರ, ಗಂಡಿನ ಕಡೆಯವರು ತಂದಿದ್ದ ಹೊಸ ಸೀರೆಯನ್ನು ಉಡಿಸಿ ಮಂಟಪದಲ್ಲಿ ನಿಲ್ಲಿಸಿ, ಶಾಸ್ತ್ರೋಕ್ತವಾಗಿ ಮದುವೆ ಮಾಡಲಾಯಿತು. ನಂತರ ನವಜೋಡಿಗೆ ಆರತಿ ಬೆಳಗಿ, ಹಸುವನ್ನು ಮನೆತುಂಬಿಸಿಕೊಳ್ಳಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT