(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಮದ್ಯ ಸೇವಿಸಿ ವಾಹನ ಚಲಾಯಿಸದಿರಿ

ನಗರ ಸಂಚಾರ ಪೊಲೀಸ್ ಇಲಾಖೆಯಿಂದ ಡಿ.12ರಿಂದ ಜ.5ವರೆಗೆ `ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬೇಡಿ' ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ನಗರ ಸಂಚಾರಿ ಪೊಲೀಸ್ ಆಯುಕ್ತ ಡಾ ಎಂ.ಎ.ಸಲೀಂ ತಿಳಿಸಿದ್ದಾರೆ...

ಬೆಂಗಳೂರು: ನಗರ ಸಂಚಾರ ಪೊಲೀಸ್ ಇಲಾಖೆಯಿಂದ ಡಿ.12ರಿಂದ ಜ.5ವರೆಗೆ `ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬೇಡಿ' ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ನಗರ ಸಂಚಾರಿ ಪೊಲೀಸ್ ಆಯುಕ್ತ ಡಾ ಎಂ.ಎ.ಸಲೀಂ ತಿಳಿಸಿದ್ದಾರೆ.

ಬೆಂಗಳೂರು ನಗರ ಸಂಚಾರ ಪೊಲೀಸ್ ಇಲಾಖೆ ಶನಿವಾರ ಬ್ರಿಗೇಡ್ ರಸ್ತೆಯಲ್ಲಿ ಆಯೋಜಿಸಿದ್ದ `ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬೇಡಿ' ಆಂದೋಲನದಲ್ಲಿ
ಮಾತನಾಡಿದ ಅವರು, ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದಟಛಿ ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಲಾಗುವುದು. ಸಂಚಾರಿ ಪೊಲೀಸರಿಗೆ ಮದ್ಯಪಾನದ ಅಮಲಿನಲ್ಲಿ ವಾಹನ ಚಾಲನೆ ಮಾಡುತ್ತಿರುವುದು ಕಂಡು ಬಂದರೆ ಅಂತಹ ಚಾಲಕರ ಪರವಾನಗಿ ರದ್ದು ಮಾಡುವ ಅಥವಾ ಜೈಲಿಗೆ ಕಳುಹಿಸುವ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದರಿಂದ ಚಾಲಕರಲ್ಲದೇ ಬೇರೆಯವರಿಗೂ ತೊಂದರೆಯಾಗುತ್ತದೆ. ಅಮಲಿನಲ್ಲಿ ವಾಹನ ಚಲಾಯಿಸುವುದರಿಂದ ಅಪಘಾತಗಳು ಸಂಭವಿಸುತ್ತವೆ. ಅನಾಹುತಗಳನ್ನು ತಪ್ಪಿಸಲು ಹಾಗೂ ವಾಹನ ಚಾಲಕರಿಗೆ ಅರಿವು ಮೂಡಿಸುವ ಸಲುವಾಗಿ ಈ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಈ ವೇಳೆ ಸಂಚಾರ ಸಲಹೆಗಾರ ಎಂ.ಎನ್. ಶ್ರೀಹರಿ, ಬಿಬಿಎಂಪಿ ಪುನರಚನೆ ತಜ್ಞ ಸಮಿತಿ ಸದಸ್ಯ ವಿ.ರವಿಚಂದರ್ ಹಾಗೂ ಇತರರು ಇದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT