ಕಬ್ಬನ್ ಉದ್ಯಾನ 
ಜಿಲ್ಲಾ ಸುದ್ದಿ

ಕಬ್ಬನ್ ಉದ್ಯಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

ಕಬ್ಬನ್ ಉದ್ಯಾನದಲ್ಲಿ ಶುಕ್ರವಾರ ಸಂಜೆ 10ರಿಂದ ಸೋಮವಾರ ಬೆಳಗ್ಗೆ 8ರವರಗೆ ವಾಹನ ಸಂಚಾರ ನಿಷೇಧಿಸಲಾಗಿದೆ...

ಬೆಂಗಳೂರು: ಕಬ್ಬನ್ ಉದ್ಯಾನದಲ್ಲಿ ಶುಕ್ರವಾರ ಸಂಜೆ 10ರಿಂದ ಸೋಮವಾರ ಬೆಳಗ್ಗೆ 8ರವರಗೆ ವಾಹನ ಸಂಚಾರ ನಿಷೇಧಿಸಲಾಗಿದೆ.

ಮುಂಬರುವ ದಿನಗಳಲ್ಲಿ ಶನಿವಾರವೂ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲು ತೋಟಗಾರಿಕಾ ಇಲಾಖೆ ನಿರ್ಧರಿಸಿದೆ. ವರ್ಷದ 3 ರಾಷ್ಟ್ರೀಯ ದಿನಾಚರಣೆ ಸಂದರ್ಭದಲ್ಲೂ ಕಬ್ಬನ್ ಪಾರ್ಕ್‍ನಲ್ಲಿ ವಾಹನ ಸಂಚಾರ ನಿಷೇಧಿಸಲಾಗುತ್ತದೆ. ಪ್ರತಿ ಭಾನುವಾರ ಕಬ್ಬನ್ ಉದ್ಯಾನದಲ್ಲಿ ವಾಹನ ನಿಷೇಧವಿರುವ ಹಿನ್ನೆಲೆಯಲ್ಲಿ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಳು ನಡೆಯುತ್ತಿವೆ. ಭಾನುವಾರ ನಡೆಯಲಿರುವ ಉದಯರಾಗ ಕಾರ್ಯಕ್ರಮದಲ್ಲಿ ಎಂ.ಎಸ್. ತ್ಯಾಗರಾಜು ತಂಡದಿಂದ ಪಿಟೀಲು ವಾದನ ನಡೆಯಲಿದೆ.

ಯೂನಿವರ್ಸ್ ಆಟ್ರ್ಸ್ ಫೌಂಡೇಶನ್‍ನ ಅಂಜನ ರಮೇಶ್ ಅವರಿಂದ ಭರತನಾಟ್ಯ, ಬಾಲಭವನ ಸಹಯೋಗದಲ್ಲಿ ಭ್ರಮರಿ ನೃತ್ಯ ತಂಡದಿಂದ ಕಾವ್ಯ ಬಾಗಿನ ನಡೆಯಲಿದೆ. ಸಂಜೆ 4ಗಂಟೆಗೆ ಎಸ್‍ಎಫ್ಎಸ್ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ಶಾಂತರಾಜು ಅವರಿಂದ ತೀ.ನಂ. ಶ್ರೀಕಂಠಯ್ಯ ಅವರ ಕೊಡುಗೆಗಳು ಬಗ್ಗೆ ಉಪನ್ಯಾಸವಿದೆ. ವಿದ್ಯಾರಣ್ಯ ಸ್ವಯಂ ಸೇವಾ ಸಂಸ್ಥೆ ಮಕ್ಕಳಿಗಾಗಿ ನೃತ್ಯ, ಚಿತ್ರಬಿಡಿಸುವ ಕಾರ್ಯಕ್ರಮ, ಚಿತ್ರಗಳಿಗೆ ಬಣ್ಣ ಹಚ್ಚುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಸಂಧ್ಯಾರಾಗ ಕಾರ್ಯಕ್ರಮದಲ್ಲಿ ಶಾಂತರಾಜು ಮತ್ತು ತಂಡದಿಂದ ಜಾನಪದ ಸಂಭ್ರಮ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT