ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಮಂಡ್ಯ ಎಸಿ ಮೇಲೆ ಮರಳು ದಂಧೆಕೋರರಿಂದ ಹಲ್ಲೆ

ಶ್ರೀರಂಗಪಟ್ಟಣ ತಾಲೂಕು ಉಪ ವಿಭಾಗಾಧಿಕಾರಿ ಮೇಲೆ ಮರಳು ದಂಧೆ ಕೋರರಿಂದ ಸೋಮವಾರ ಹಲ್ಲೆ ಯತ್ನ ನಡೆದಿದೆ....

ಮಂಡ್ಯ: ಶ್ರೀರಂಗಪಟ್ಟಣ ತಾಲೂಕು ಉಪ ವಿಭಾಗಾಧಿಕಾರಿ ಮೇಲೆ ಮರಳು ದಂಧೆ ಕೋರರಿಂದ ಸೋಮವಾರ ಹಲ್ಲೆ ಯತ್ನ ನಡೆದಿದೆ.

ಪಾಂಡವಪುರ ತಾಲ್ಲೂಕಿನ ಚಿಕ್ಕಬ್ಯಾಡರಹಳ್ಳಿ ಬಳಿ ಉಪ ವಿಭಾಗಾಧಿಕಾರಿ ಡಾ.ಎಚ್‌.ಎಲ್‌.ನಾಗರಾಜು ಮೇಲೆ ಮರಳು ದಂಧೆಕೋರರು ಹಲ್ಲೆ ನಡೆಸಿದ್ದಾರೆ. ಇಂದು ಬೆಳಗ್ಗೆ ಸುಮಾರು 4 ಗಂಟೆ ವೇಳೆಗೆ ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಿ, ಹಲವು ಲಾರಿಗಳನ್ನು ಜಪ್ತಿ ಮಾಡಲಾಗಿತ್ತು. ನಂತರ ಅಲ್ಲಿಂದ ಹೊರಟ ನಾಗಾರಾಜು ಅವರನ್ನು ಕಾರಿನಲ್ಲಿ ಹಾಗೂ ಬೈಕ್ ನಲ್ಲಿ ಹಿಂಬಾಲಿಸಿದ ಕೆಲ ಜನ ಕಿರಂಗೂರಿನ ಬಳಿ ಹಿಡಿದು ಎಳೆದಾಡಿದ್ದಾರೆ. ನಂತರ ಅವರನ್ನು ನಾಗರಾಜು ಅವರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಈ ಸಂಬಂಧ ಮೂವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಅಕ್ರಮ ಮರಳು ದಂಧೆ ನಡೆಯುತ್ತಿರುವ ಬಗ್ಗೆ ಲಿಖಿತ ದೂರು ನೀಡಿದ ಹಿನ್ನೆಲೆಯಲ್ಲಿ ಇಂದು ದಾಳಿ ನಡೆಸಲಾಗಿತ್ತು. ಈ ಹಿಂದೆ ಪೊಲೀಸರ ಮೇಲೆ ಮರಳು ದಂಧೆ ಕೋರರು ಹಲ್ಲೆ ನಡೆಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT