(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು

ವಸತಿಗೃಹದ ಮಹಡಿಯ ಬಾಲ್ಕನಿಯಲ್ಲಿ ನಿಂತು ಮೊಬೈಲ್ ಫೋನ್‍ನಲ್ಲಿ ಮಾತನಾಡುತ್ತಿ ದ್ದ ವ್ಯಕ್ತಿಗೆ ವಿದ್ಯುತ್ ತಂತಿ ತಗುಲಿ, ಆತ ಮೃತಪಟ್ಟಿರುವ ಘಟನೆ ಭಾನುವಾರ ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ...

ಬೆಂಗಳೂರು: ವಸತಿಗೃಹದ ಮಹಡಿಯ ಬಾಲ್ಕನಿಯಲ್ಲಿ ನಿಂತು ಮೊಬೈಲ್ ಫೋನ್‍ನಲ್ಲಿ ಮಾತನಾಡುತ್ತಿ ದ್ದ ವ್ಯಕ್ತಿಗೆ ವಿದ್ಯುತ್ ತಂತಿ ತಗುಲಿ, ಆತ ಮೃತಪಟ್ಟಿರುವ ಘಟನೆ ಭಾನುವಾರ ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತಮಿಳುನಾಡಿನ ಸೇಲಂ ಮೂಲದ ಗೌರಿಶಂಕರ್ (25) ಮೃತರು. ಯಾವು ದೋ ಕೆಲಸದ ನಿಮಿತ್ತ ಶನಿವಾರ ನಗರಕ್ಕೆ ಬಂದಿದ್ದ ಅವರು, ಮಾರುತಿನಗರದ ಸಿ ಪರ್ಲ್ ವಸತಿಗೃಹದಲ್ಲಿ ತಂಗಿದ್ದರು. ರಸ್ತೆ ಪಕ್ಕದಲ್ಲಿರುವ ವಸತಿ ಗೃಹದ ಕಟ್ಟಡದ ಸಮೀಪ ಟ್ರಾನ್ಸ್ ಫಾರಂ ಇದೆ. ಹೀಗಾಗಿ ಅದರ ವಿದ್ಯುತ್ ತಂತಿಗಳು ಮಹಡಿಗೆ ಬಹಳ ಹತ್ತಿರದಲ್ಲಿ ಹಾದು ಹೋಗಿವೆ. ಗೌರಿಶಂಕರ್ ಭಾನುವಾರ ಮಧ್ಯಾಹ್ನ 1.30ರ ಸುಮಾರಿನಲ್ಲಿ ಮಹಡಿಯ ಬಾಲ್ಕನಿಯಲ್ಲಿ ನಿಂತು ಮೊಬೈಲ್ ಫೋನ್‍ನಲ್ಲಿ ಯಾರೊಂದಿಗೋ ಮಾತಿನಲ್ಲಿ ತಲ್ಲೀನರಾಗಿದ್ದರು. ಈ ವೇಳೆ ಗೌರಿಶಂಕರ್ ಅವರ ಕೈ ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಪ್ರವಹಿಸಿದೆ.

ಇದರಿಂದ ಕುಸಿದು ಬಿದ್ದು ಕಿರುಚಿದ್ದಾರೆ. ತಕ್ಷಣ ವಸತಿಗೃಹದಲ್ಲಿದ್ದವರು ಹಾಗೂ ಸಿಬ್ಬಂದಿ ಗೌರಿಶಂಕರ್ ನೆರವಿಗೆ ಧಾವಿಸಿ ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ದರು. ಈ ವೇಳೆಗೆ ಗೌರಿಶಂಕರ್ ಮೃತಪಟ್ಟಿದ್ದರು. ಮಹಡಿ ಸಮೀಪವೇ ವಿದ್ಯುತ್ ತಂತಿ ಹಾದು ಹೋಗಿರುವುದರಿಂದ ಪ್ಲಾಸ್ಟಿಕ್ ಸುತ್ತಲಾಗಿದೆ. ಆದರೂ ಗೌರಿಶಂಕರ್‍ಗೆ ವಿದ್ಯುತ್ ತಗುಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT