(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು

ವಸತಿಗೃಹದ ಮಹಡಿಯ ಬಾಲ್ಕನಿಯಲ್ಲಿ ನಿಂತು ಮೊಬೈಲ್ ಫೋನ್‍ನಲ್ಲಿ ಮಾತನಾಡುತ್ತಿ ದ್ದ ವ್ಯಕ್ತಿಗೆ ವಿದ್ಯುತ್ ತಂತಿ ತಗುಲಿ, ಆತ ಮೃತಪಟ್ಟಿರುವ ಘಟನೆ ಭಾನುವಾರ ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ...

ಬೆಂಗಳೂರು: ವಸತಿಗೃಹದ ಮಹಡಿಯ ಬಾಲ್ಕನಿಯಲ್ಲಿ ನಿಂತು ಮೊಬೈಲ್ ಫೋನ್‍ನಲ್ಲಿ ಮಾತನಾಡುತ್ತಿ ದ್ದ ವ್ಯಕ್ತಿಗೆ ವಿದ್ಯುತ್ ತಂತಿ ತಗುಲಿ, ಆತ ಮೃತಪಟ್ಟಿರುವ ಘಟನೆ ಭಾನುವಾರ ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತಮಿಳುನಾಡಿನ ಸೇಲಂ ಮೂಲದ ಗೌರಿಶಂಕರ್ (25) ಮೃತರು. ಯಾವು ದೋ ಕೆಲಸದ ನಿಮಿತ್ತ ಶನಿವಾರ ನಗರಕ್ಕೆ ಬಂದಿದ್ದ ಅವರು, ಮಾರುತಿನಗರದ ಸಿ ಪರ್ಲ್ ವಸತಿಗೃಹದಲ್ಲಿ ತಂಗಿದ್ದರು. ರಸ್ತೆ ಪಕ್ಕದಲ್ಲಿರುವ ವಸತಿ ಗೃಹದ ಕಟ್ಟಡದ ಸಮೀಪ ಟ್ರಾನ್ಸ್ ಫಾರಂ ಇದೆ. ಹೀಗಾಗಿ ಅದರ ವಿದ್ಯುತ್ ತಂತಿಗಳು ಮಹಡಿಗೆ ಬಹಳ ಹತ್ತಿರದಲ್ಲಿ ಹಾದು ಹೋಗಿವೆ. ಗೌರಿಶಂಕರ್ ಭಾನುವಾರ ಮಧ್ಯಾಹ್ನ 1.30ರ ಸುಮಾರಿನಲ್ಲಿ ಮಹಡಿಯ ಬಾಲ್ಕನಿಯಲ್ಲಿ ನಿಂತು ಮೊಬೈಲ್ ಫೋನ್‍ನಲ್ಲಿ ಯಾರೊಂದಿಗೋ ಮಾತಿನಲ್ಲಿ ತಲ್ಲೀನರಾಗಿದ್ದರು. ಈ ವೇಳೆ ಗೌರಿಶಂಕರ್ ಅವರ ಕೈ ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಪ್ರವಹಿಸಿದೆ.

ಇದರಿಂದ ಕುಸಿದು ಬಿದ್ದು ಕಿರುಚಿದ್ದಾರೆ. ತಕ್ಷಣ ವಸತಿಗೃಹದಲ್ಲಿದ್ದವರು ಹಾಗೂ ಸಿಬ್ಬಂದಿ ಗೌರಿಶಂಕರ್ ನೆರವಿಗೆ ಧಾವಿಸಿ ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ದರು. ಈ ವೇಳೆಗೆ ಗೌರಿಶಂಕರ್ ಮೃತಪಟ್ಟಿದ್ದರು. ಮಹಡಿ ಸಮೀಪವೇ ವಿದ್ಯುತ್ ತಂತಿ ಹಾದು ಹೋಗಿರುವುದರಿಂದ ಪ್ಲಾಸ್ಟಿಕ್ ಸುತ್ತಲಾಗಿದೆ. ಆದರೂ ಗೌರಿಶಂಕರ್‍ಗೆ ವಿದ್ಯುತ್ ತಗುಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT