(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು

ವಸತಿಗೃಹದ ಮಹಡಿಯ ಬಾಲ್ಕನಿಯಲ್ಲಿ ನಿಂತು ಮೊಬೈಲ್ ಫೋನ್‍ನಲ್ಲಿ ಮಾತನಾಡುತ್ತಿ ದ್ದ ವ್ಯಕ್ತಿಗೆ ವಿದ್ಯುತ್ ತಂತಿ ತಗುಲಿ, ಆತ ಮೃತಪಟ್ಟಿರುವ ಘಟನೆ ಭಾನುವಾರ ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ...

ಬೆಂಗಳೂರು: ವಸತಿಗೃಹದ ಮಹಡಿಯ ಬಾಲ್ಕನಿಯಲ್ಲಿ ನಿಂತು ಮೊಬೈಲ್ ಫೋನ್‍ನಲ್ಲಿ ಮಾತನಾಡುತ್ತಿ ದ್ದ ವ್ಯಕ್ತಿಗೆ ವಿದ್ಯುತ್ ತಂತಿ ತಗುಲಿ, ಆತ ಮೃತಪಟ್ಟಿರುವ ಘಟನೆ ಭಾನುವಾರ ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತಮಿಳುನಾಡಿನ ಸೇಲಂ ಮೂಲದ ಗೌರಿಶಂಕರ್ (25) ಮೃತರು. ಯಾವು ದೋ ಕೆಲಸದ ನಿಮಿತ್ತ ಶನಿವಾರ ನಗರಕ್ಕೆ ಬಂದಿದ್ದ ಅವರು, ಮಾರುತಿನಗರದ ಸಿ ಪರ್ಲ್ ವಸತಿಗೃಹದಲ್ಲಿ ತಂಗಿದ್ದರು. ರಸ್ತೆ ಪಕ್ಕದಲ್ಲಿರುವ ವಸತಿ ಗೃಹದ ಕಟ್ಟಡದ ಸಮೀಪ ಟ್ರಾನ್ಸ್ ಫಾರಂ ಇದೆ. ಹೀಗಾಗಿ ಅದರ ವಿದ್ಯುತ್ ತಂತಿಗಳು ಮಹಡಿಗೆ ಬಹಳ ಹತ್ತಿರದಲ್ಲಿ ಹಾದು ಹೋಗಿವೆ. ಗೌರಿಶಂಕರ್ ಭಾನುವಾರ ಮಧ್ಯಾಹ್ನ 1.30ರ ಸುಮಾರಿನಲ್ಲಿ ಮಹಡಿಯ ಬಾಲ್ಕನಿಯಲ್ಲಿ ನಿಂತು ಮೊಬೈಲ್ ಫೋನ್‍ನಲ್ಲಿ ಯಾರೊಂದಿಗೋ ಮಾತಿನಲ್ಲಿ ತಲ್ಲೀನರಾಗಿದ್ದರು. ಈ ವೇಳೆ ಗೌರಿಶಂಕರ್ ಅವರ ಕೈ ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಪ್ರವಹಿಸಿದೆ.

ಇದರಿಂದ ಕುಸಿದು ಬಿದ್ದು ಕಿರುಚಿದ್ದಾರೆ. ತಕ್ಷಣ ವಸತಿಗೃಹದಲ್ಲಿದ್ದವರು ಹಾಗೂ ಸಿಬ್ಬಂದಿ ಗೌರಿಶಂಕರ್ ನೆರವಿಗೆ ಧಾವಿಸಿ ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ದರು. ಈ ವೇಳೆಗೆ ಗೌರಿಶಂಕರ್ ಮೃತಪಟ್ಟಿದ್ದರು. ಮಹಡಿ ಸಮೀಪವೇ ವಿದ್ಯುತ್ ತಂತಿ ಹಾದು ಹೋಗಿರುವುದರಿಂದ ಪ್ಲಾಸ್ಟಿಕ್ ಸುತ್ತಲಾಗಿದೆ. ಆದರೂ ಗೌರಿಶಂಕರ್‍ಗೆ ವಿದ್ಯುತ್ ತಗುಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT