ಕುಕ್ಕೆಯಲ್ಲಿ ನಡೆದ ಎಡೆ ಸ್ನಾನ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಎಡೆಸ್ನಾನ

ಕುಕ್ಕೆ ಸುಬ್ರಹ್ಮಣ್ಯದಲ್ಲಿ 120ಕ್ಕೂ ಅಧಿಕ ಭಕ್ತರು ಎಡೆಸ್ನಾನ ಸೇವೆಗೈದರು. ಗೋವು ಉಂಡ ಎಂಜಲು ಎಲೆಯ ಮೇಲೆ ಭಕ್ತರು ದೇವಾ ಲಯದ ಹೊರಾಂಗಣದಲ್ಲಿ ಉರುಳು ಸೇವೆ ನಡೆಸುವ ಮೂಲಕ ಎಡೆಸ್ನಾನ ಹರಕೆ ಸಲ್ಲಿಸಿದರು..

ಸುಬ್ರಹಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ 120ಕ್ಕೂ ಅಧಿಕ ಭಕ್ತರು ಎಡೆಸ್ನಾನ ಸೇವೆಗೈದರು. ಗೋವು ಉಂಡ ಎಂಜಲು ಎಲೆಯ ಮೇಲೆ ಭಕ್ತರು ದೇವಾ ಲಯದ ಹೊರಾಂಗಣದಲ್ಲಿ ಉರುಳು ಸೇವೆ  ನಡೆಸುವ ಮೂಲಕ ಎಡೆಸ್ನಾನ ಹರಕೆ ಸಲ್ಲಿಸಿದರು.

ಧಾರ್ಮಿಕ ದತ್ತಿ ಇಲಾಖೆಯ ಶೈವಾಗಮ ಪಂಡಿತ ವೇದಮೂರ್ತಿ ಎಸ್. ರಾಜಗೋಪಾಲ ಹಾಗೂ ಪಂಡಿತ ವೇದಮೂರ್ತಿ ವಿಜಯ ಕುಮಾರ್ ಸ್ಥಳದಲ್ಲಿದ್ದು, ಎಡೆಸ್ನಾನದ ಕುರಿತು ಮಾರ್ಗದರ್ಶನ  ನೀಡಿದರು. ದೇವಳದ ಹೊರಾಂಗಣದ ಸುತ್ತಲು ಬಾಳೆಯ ಎಲೆಗಳನ್ನು ಹಾಕಿ ಅದರ ಮೇಲೆ ಊಟಕ್ಕೆ ಬಡಿಸಿದರು. ಬಳಿಕ ಗೋವುಗಳ ಮೂಲಕ ಎಲೆಯ ಮೇಲಿನ ಪ್ರಸಾದವನ್ನು ತಿನ್ನಿಸಲಾಯಿತು. ಗೋವುಗಳು ತಿಂದ ಪ್ರಸಾದದ ಮೇಲೆ ಉರುಳು ಸೇವೆ ನಡೆಯಿತು.

ಮೊದಲ ಬಾರಿ

ಚಂಪಾಷಷ್ಠಿಯಂದು ಮೊದಲ ಬಾರಿಗೆ ಈ ಬಾರಿ ಎಡೆಸ್ನಾನ ಕ್ಷೇತ್ರದಲ್ಲಿ ನಡೆದಿದೆ. ಕಳೆದ ವರ್ಷ ಚಂಪಾಷಷ್ಠಿ ಮಹೋತ್ಸವದ ಸಂದರ್ಭದಲ್ಲಿ ಮಡೆಮಡಸ್ನಾನ ಸೇವೆ ನಡೆದು ಬಳಿಕ ಕಿರುಷಷ್ಠಿ  ವೇಳೆಗೆ ಎಡೆಸ್ನಾನ ಸೇವೆ ನಡೆದಿತ್ತು. ಇನ್ನೂ ಎರಡು ದಿನ ಎಡೆ ಸ್ನಾನ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT