ಬಿಬಿಎಂಪಿ ಆಯುಕ್ತ ಜಿ.ಕುಮಾರ್ ನಾಯಕ್ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಪಾಲಿಕೆ ಆಯುಕ್ತ ನಾಯಕ್‍ಗೆ ನ್ಯಾಯಾಂಗ ನಿಂದನೆ ನೋಟಿಸ್

ಕಾನೂನು ಬಾಹಿರವಾಗಿ ಚರ್ಚ್ ನಿರ್ಮಾಣ ಮಾಡಿದ್ದ ಆರೋಪ ಸಂಬಂಧ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ನೀಡಿದ್ದ ಆದೇಶ ಪಾಲಿಸದ ಬಿಬಿಎಂಪಿ ಆಯುಕ್ತ ಜಿ.ಕುಮಾರ್ ನಾಯಕ್ ಅವರಿಗೆ ಹೈಕೋರ್ಟ್ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿ...

ಬೆಂಗಳೂರು: ಕಾನೂನು ಬಾಹಿರವಾಗಿ ಚರ್ಚ್ ನಿರ್ಮಾಣ ಮಾಡಿದ್ದ ಆರೋಪ ಸಂಬಂಧ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ನೀಡಿದ್ದ ಆದೇಶ ಪಾಲಿಸದ ಬಿಬಿಎಂಪಿ ಆಯುಕ್ತ ಜಿ.ಕುಮಾರ್ ನಾಯಕ್ ಅವರಿಗೆ ಹೈಕೋರ್ಟ್ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿ ಆದೇಶಿಸಿದೆ.

ಬೆರ್ತಾಲೋಮಿಯೋ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಎನ್.ಕುಮಾರ್ ಮತ್ತು ನ್ಯಾ.ಬಿ.ವಿ.ನಾಗರತ್ನ ಅವರಿದ್ದ ನ್ಯಾಯಪೀಠ, ಚರ್ಚ್‍ನ ಆಚ್ರ್ ಬಿಷಪ್ ಬರ್ನಾಡ್ ಮೋರಸ್ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

ಕಮ್ಮನಹಳ್ಳಿಯ ಮುಖ್ಯರಸ್ತೆಯಲ್ಲಿ ಕಾನೂನುಬಾಹಿರವಾಗಿ ಚರ್ಚ್ ನಿರ್ಮಾಣ ಮಾಡಿರುವ ಕುರಿತು, ಬಿಬಿಎಂಪಿ ಅಧಿಕಾರಿಗಳ ಸ್ಥಳ ಪರಿಶೀಲನೆ ನಡೆಸಿ ಅಕ್ರಮವಿದ್ದಲ್ಲಿ ವರದಿ ನೀಡುವಂತೆ ಹೈಕೋರ್ಟ್ ಸೂಚಿಸಿತ್ತು. ಅದರಂತೆ ಸ್ಥಳ ಪರಿಶೀಲನೆ ನಡೆಸಿದ್ದ ಪಾಲಿಕೆ ಎಂಜಿನಿಯರ್ ಚರ್ಚ್ ನಿರ್ಮಾಣದಲ್ಲಿ ನಿಯಮಗಳ ಉಲ್ಲಂಘನೆಯಾಗಿದೆ ಎಂದು ವರದಿ ನೀಡಿದ್ದರು. ಈ ವರದಿ ಆಧಾರದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿತ್ತು. ಈ ಆದೇಶವನ್ನು ಪಾಲಿಸದ ಬಿಬಿಎಂಪಿ ಆಯುಕ್ತರ ವಿರುದ್ಧ ಬೆರ್ತಾಲೋಮಿಯೋ ಮತ್ತೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | 'ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ಪತ್ರಿಕಾಗೋಷ್ಠಿ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಮುಂದಿನ CM ಡಿಕೆ.ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್; Video

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

SCROLL FOR NEXT