ಕೆಎಸ್ಆರ್ ಟಿಸಿ 
ಜಿಲ್ಲಾ ಸುದ್ದಿ

ಕೆಎಸ್‍ಆರ್‍ಟಿಸಿ ನೌಕರರ ವೇತನ ಪರಿಷ್ಕರಣೆಗೆ ಒತ್ತಾಯ

ಸರ್ಕಾರ ಶೀಘ್ರವೇ ವೇತನ ಪರಿಷ್ಕರಣೆ ಮಾಡಿ ವಿವಿಧ ಸೌಲಭ್ಯಗಳನ್ನು ನೀಡಬೇಕೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್...

ಬೆಂಗಳೂರು: ಸರ್ಕಾರ ಶೀಘ್ರವೇ ವೇತನ ಪರಿಷ್ಕರಣೆ ಮಾಡಿ ವಿವಿಧ ಸೌಲಭ್ಯಗಳನ್ನು ನೀಡಬೇಕೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ ಒತ್ತಾಯಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಫೆಡರೇಷನ್ ಗೌರವಾಧ್ಯಕ್ಷ ಎಸ್. ಪ್ರಸನ್ನ ಕುಮಾರ್, ಅಧ್ಯಕ್ಷ ಎಚ್.ಡಿ. ರೇವಪ್ಪ ಮಾತನಾಡಿ, ಕೆಎಸ್‍ಆರ್‍ಟಿಸಿ, ಬಿಎಂಟಿಸಿ, ಈಶಾನ್ಯ, ವಾಯುವ್ಯ, ನಿಗಮಗಳಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ವೇತನ ಪರಿಷ್ಕರಣೆ ಮಾಡಬೇಕಿದೆ ಎಂದರು. ಈ ನಿಗಮಗಳಲ್ಲಿ 1.20 ಲಕ್ಷ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಉಳಿದ ಎಲ್ಲಾ ವಿಭಾಗಗಳ ಸಿಬ್ಬಂದಿಗೆ ವೇತನ ಪರಿಷ್ಕರಣೆ ಮಾಡಲಾಗಿದೆ. ನಮಗೆ ಮಾತ್ರ ವೇತನ ಪರಿಷ್ಕರಣೆ ಮಾಡಿಲ್ಲ. ಕೇಂದ್ರ ಸರ್ಕಾರ 7ನೇ ವೇತನ ಆಯೋಗ ಅನುಷ್ಠಾನಕ್ಕೆ ಮುಂದಾಗಿದೆ.

ನಮ್ಮ ರಾಜ್ಯ ಸರ್ಕಾರವೂ ಕೂಡ ವೇತನ ಪರಿಷ್ಕರಣೆ ಮಾಡಬೇಕು. ಜ.1ರಂದು ಪರಿಷ್ಕರಣೆ ನಡೆಯಲಿದೆ. ಡಿ.19ಕ್ಕೆ ಎಲ್ಲರಿಗೂ ಸಭೆಯನ್ನು ಕರೆಯಲಾಗಿದೆ ಒಂದು ವೇಳೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕೇವಲ ಆಶ್ವಾಸನೆಯಾದರೆ ತೀವ್ರ ಹೋರಾಟ ಕೈಗೊಳ್ಳಲಾಗುತ್ತದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Union Budget 2026: 'ಕರ್ತವ್ಯ ಮಂತ್ರ' ಪಠಿಸಿದ ನಿರ್ಮಲಾ; ಹೂಡಿಕೆ, ಉದ್ಯೋಗ, ಉತ್ಪಾದನೆಗೆ ಒತ್ತು

Union Budget 2026: ನಾರಿ ಶಕ್ತಿ, ರೈತರು, ಕೃಷಿಯಲ್ಲಿ ಮೀನುಗಾರಿಕೆ, AIಗೆ ಆದ್ಯತೆ

ವಾಯು ಮಾಲಿನ್ಯ 'ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ' ಎಂದು ಘೋಷಿಸಿ; ಸಂಸತ್ತಿನಲ್ಲಿ ಚರ್ಚೆಗೆ ರಾಹುಲ್ ಆಗ್ರಹ

Union Budget 2026: ಸರ್ಕಾರದ ಮೂರು ಕರ್ತವ್ಯಗಳನ್ನು ಪಟ್ಟಿ ಮಾಡಿದ ನಿರ್ಮಲಾ

Union Budget 2026 Live updates | ನಿರ್ಮಲಾ ಸೀತಾರಾಮನ್ ಬಜೆಟ್ ಬಂಡವಾಳ ಹೂಡಿಕೆ, ಉದ್ಯೋಗ ಮತ್ತು ಉತ್ಪಾದನೆಯಿಂದ ಬೆಳವಣಿಗೆಗೆ ಶಕ್ತಿ ತುಂಬಲು ಒತ್ತು

SCROLL FOR NEXT