ಕೆಎಸ್ಆರ್ ಟಿಸಿ 
ಜಿಲ್ಲಾ ಸುದ್ದಿ

ಕೆಎಸ್‍ಆರ್‍ಟಿಸಿ ನೌಕರರ ವೇತನ ಪರಿಷ್ಕರಣೆಗೆ ಒತ್ತಾಯ

ಸರ್ಕಾರ ಶೀಘ್ರವೇ ವೇತನ ಪರಿಷ್ಕರಣೆ ಮಾಡಿ ವಿವಿಧ ಸೌಲಭ್ಯಗಳನ್ನು ನೀಡಬೇಕೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್...

ಬೆಂಗಳೂರು: ಸರ್ಕಾರ ಶೀಘ್ರವೇ ವೇತನ ಪರಿಷ್ಕರಣೆ ಮಾಡಿ ವಿವಿಧ ಸೌಲಭ್ಯಗಳನ್ನು ನೀಡಬೇಕೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ ಒತ್ತಾಯಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಫೆಡರೇಷನ್ ಗೌರವಾಧ್ಯಕ್ಷ ಎಸ್. ಪ್ರಸನ್ನ ಕುಮಾರ್, ಅಧ್ಯಕ್ಷ ಎಚ್.ಡಿ. ರೇವಪ್ಪ ಮಾತನಾಡಿ, ಕೆಎಸ್‍ಆರ್‍ಟಿಸಿ, ಬಿಎಂಟಿಸಿ, ಈಶಾನ್ಯ, ವಾಯುವ್ಯ, ನಿಗಮಗಳಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ವೇತನ ಪರಿಷ್ಕರಣೆ ಮಾಡಬೇಕಿದೆ ಎಂದರು. ಈ ನಿಗಮಗಳಲ್ಲಿ 1.20 ಲಕ್ಷ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಉಳಿದ ಎಲ್ಲಾ ವಿಭಾಗಗಳ ಸಿಬ್ಬಂದಿಗೆ ವೇತನ ಪರಿಷ್ಕರಣೆ ಮಾಡಲಾಗಿದೆ. ನಮಗೆ ಮಾತ್ರ ವೇತನ ಪರಿಷ್ಕರಣೆ ಮಾಡಿಲ್ಲ. ಕೇಂದ್ರ ಸರ್ಕಾರ 7ನೇ ವೇತನ ಆಯೋಗ ಅನುಷ್ಠಾನಕ್ಕೆ ಮುಂದಾಗಿದೆ.

ನಮ್ಮ ರಾಜ್ಯ ಸರ್ಕಾರವೂ ಕೂಡ ವೇತನ ಪರಿಷ್ಕರಣೆ ಮಾಡಬೇಕು. ಜ.1ರಂದು ಪರಿಷ್ಕರಣೆ ನಡೆಯಲಿದೆ. ಡಿ.19ಕ್ಕೆ ಎಲ್ಲರಿಗೂ ಸಭೆಯನ್ನು ಕರೆಯಲಾಗಿದೆ ಒಂದು ವೇಳೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕೇವಲ ಆಶ್ವಾಸನೆಯಾದರೆ ತೀವ್ರ ಹೋರಾಟ ಕೈಗೊಳ್ಳಲಾಗುತ್ತದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೋಮಾ ಸ್ಥಿತಿಯಲ್ಲಿ ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ? ವದಂತಿ ಬೆನ್ನಲ್ಲೇ ದಿಢೀರ್ Video ಬಿಡುಗಡೆ ಮಾಡಿದ ಇರಾನ್; ಸತ್ಯ ಮುಚ್ಚಿಡುವ ಯತ್ನವೇ..?

ಇಡೀ ದೇಹಕ್ಕೆ ಹರಡಿದ cancer, Joe Biden ಆರೋಗ್ಯ ಮತ್ತಷ್ಟು ಕ್ಷೀಣ; BBC ಸಂದರ್ಶನದಲ್ಲಿ ಪುತ್ರ ಹಂಟರ್ ಕಳವಳ

KBC ವೇದಿಕೆಯಲ್ಲಿ ಆಮಿರ್ ಖಾನ್‌; ‘4ನೇ ಮದುವೆ ಯಾವಾಗ?’; ಕಾಲೆಳೆದ ನೆಟ್ಟಿಗರು, Amitabh bachchan ಶೋ Promoಗೆ ಕಮೆಂಟ್‌ಗಳ ಮಹಾಪೂರ..!

40 ಕೋಟಿ ಯುವಕರು ದೇಶದ ನಿಜವಾದ ಶಕ್ತಿ, ಆದರೆ ನಿರುದ್ಯೋಗ ತಾಂಡವವಾಡುತ್ತಿದೆ: ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ

Toxic Trailer: ನಾನು ಬರೋ ಸಮಯ ಬಂದಿದೆ ಎಂದ ಯಶ್, ನಾವೆಲ್ಲರೂ ಕಾಯುತ್ತಿದ್ದೇವೆ ಎಂದ ಶಿವಣ್ಣ!