ಗಣೇಶ್‌ - ಪಾಪಚ್ಚಿ 
ಜಿಲ್ಲಾ ಸುದ್ದಿ

ಅನೈತಿಕ ಸಂಬಂಧ: ಪತಿಯಿಂದ ಪತ್ನಿ, ಪ್ರಿಯಕರನ ಬರ್ಬರ ಹತ್ಯೆ

ಪತ್ನಿ ಹಾಗೂ ಆಕೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಎಂ.ಎಸ್‌.ಪಾಳ್ಯ ಬಳಿಯ...

ಬೆಂಗಳೂರು: ಪತ್ನಿ ಹಾಗೂ ಆಕೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಎಂ.ಎಸ್‌.ಪಾಳ್ಯ ಬಳಿಯ ಸಾಯಿನಗರದಲ್ಲಿ ನಡೆದಿದೆ.

ನಿನ್ನೆ ರಾತ್ರಿ ಸಾಯಿನಗರದ ಸಂಭ್ರಮ್‌ ಇಂಜಿನಿಯರಿಂಗ್‌ ಕಾಲೇಜಿನ ಹಿಂಬದಿಯ ಪಾಳು ಮನೆಯೊಂದರಲ್ಲಿದ್ದ ಈ ಜೋಡಿಯನ್ನು ರೊಚ್ಚಿಗೆದ್ದ ಪತಿ ಚಾಕುವಿನಿಂದ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದಿದ್ದಾನೆ.

ಹತ್ಯೆಗೀಡಾದವರು 38 ವರ್ಷದ  ಮಹಿಳೆ ಪಾಪಚ್ಚಿ ಅಲಿಯಾಸ್ ಪಾರ್ವತಿ ಹಾಗೂ ಆಕೆಯ ಪ್ರಿಯಕರ 40 ವರ್ಷದ ಗಣೇಶ್‌ ಎಂದು ಗುರುತಿಸಲಾಗಿದೆ.

ಗಣೇಶ್‌ ಮತ್ತು ಪಾಪಚ್ಚಿ ಅನೈತಿಕ ಸಂಬಂಧ ಹೊಂದಿದ್ದರು ಎಂದು ಹೇಳಲಾಗಿದ್ದು ,ಇದರಿಂದ ಆಕ್ರೋಷಿತನಾದ ಪಾಪಚ್ಚಿಯ ಪತಿ ರಾಜು ಕೊಲಗೈದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಆರೋಪಿ ಪತಿ ರಾಜುವನ್ನು ವಿದ್ಯಾರಣ್ಯಪುರ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

20 ವರ್ಷದ ಹಿಂದೆ ರಾಜು ಅವರನ್ನು ಮದುವೆಯಾಗಿದ್ದ ಪಾರ್ವತಿಗೆ ಒಂದು ಗಂಡು ಹಾಗೂ ಎರಡು ಹೆಣ್ಣುಮಕ್ಕಳಿವೆ. ಇತ್ತ ಗಣೇಶ್ ಕೂಡ ನಾಗರತ್ನ ಎಂಬುವವರನ್ನು ವಿವಾಹವಾಗಿದ್ದು, ಮೂವರು ಮಕ್ಕಳಿದ್ದಾರೆ. ಈ ಎರಡೂ ಕುಟುಂಬಗಳು ಒಂದೇ ಕಡೆ ವಾಸಿಸುತ್ತಿದ್ದವು,

ಪ್ಲಾಸ್ಟಿಕ್ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಗಣೇಶ್ ಹಾಗೂ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಪಾಪಚ್ಚಿ ನಡುವೆ ಕಳೆದ 15 ವರ್ಷಗಳಿಂದ ಪರಿಚಯವಿದ್ದು, ಅದು ಅನೈತಿಕ ಸಂಬಂಧಕ್ಕೆ ತಿರುಗಿತ್ತು ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT