ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಕುಡಿಯುವ ನೀರಿಗಾಗಿ ಮಾತ್ರ ಎತ್ತಿನಹೊಳೆ: ಸರ್ಕಾರ ಸ್ಪಷ್ಟನೆ

ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಎತ್ತಿನಹೊಳೆ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಇದರ ಜವಾಬ್ದಾರಿಯನ್ನು ಕರ್ನಾಟಕ ನೀರಾವರಿ ನಿಗಮಕ್ಕೆ ವಹಿಸಲಾಗಿದೆ...

ಕೋಲಾರ: ಅತ್ಯಂತ ಬರಪೀಡಿತ ಹಾಗೂ ಕುಡಿಯುವ ನೀರಿನ ತೀವ್ರ ಅಭಾವ ಎದುರಿಸುತ್ತಿರುವ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಎತ್ತಿನಹೊಳೆ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಇದರ ಜವಾಬ್ದಾರಿಯನ್ನು ಕರ್ನಾಟಕ ನೀರಾವರಿ ನಿಗಮಕ್ಕೆ ವಹಿಸಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಈ ಯೋಜನೆಗೆ 13.93 ಹೆಕ್ಟೇರ್ ಪ್ರದೇಶದ ಅಗತ್ಯವಿದ್ದು, ಇದರ ತೀರುವಳಿಗಾಗಿ ಸಲ್ಲಿಸಿರುವ ಪ್ರಸ್ತಾವನೆಯನ್ನು ಡಿಸೆಂಬರ್ 18 ರಂದು ನಡೆಯುವ ಪ್ರಾದೇಶಿಕ ಉನ್ನತ ಅಧಿಕಾರಿಗಳ ಸಮಿತಿಗೆ ಅಂತಿಮ ತೀರ್ಮಾನಕ್ಕಾಗಿ ಸಲ್ಲಿಸಲಾಗಿದೆ.

ಅರಣ್ಯ ಇಲಾಖೆಯು ಅರಣ್ಯ ಕಾಯಿದೆ ಉಲ್ಲಂಘನೆ ಮಾಡಿಲ್ಲ ಎಂದು ದೃಢೀಕರಿಸಿದ್ದರೂ ಕೂಡ, ನ್ಯಾಯಾಧೀಕರಣದ ಸಲಹೆ ಮೇರೆಗೆ ಹಾಗೂ ಅರಣ್ಯ ಪ್ರದೇಶದ ತೀರುವಳಿ ಪ್ರತಿಕ್ರಿಯೆ ಅಂತಿಮ ಘಟ್ಟವನ್ನು ತಲುಪಿರುವುದರಿಂದ, ಪ್ರಕರಣದ ಮುಂದಿನ ವಿಚಾರಣೆಯನ್ನು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣಕ್ಕೆ ನೀಡಲಾಗಿದೆ. ಯಾವುದೇ ಕಾಮಗಾರಿ ನಡೆಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಡಲಾಗಿದ್ದು, ಇದರ ಅನುಸಾರ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದ ಎಲ್ಲಾ ಗುತ್ತಿಗೆದಾರರಿಗೆ ಸೂಚನೆಗಳನ್ನು ನೀಡಿ, ಕಾಮಗಾರಿಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.

ಇದು ಯೋಜನಾ ಪ್ರದೇಶದ ಜನರ ಗಮನಕ್ಕೆ ಬಂದಿದ್ದು, ಈ ವಿಷಯದಲ್ಲಿ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿರುವ ಯಾವುದೇ ವ್ಯಕ್ತಿಯಿಂದ ಆಕ್ಷೇಪಣೆ ಅಥವಾ ದೂರುಗಳು ಬಂದಿಲ್ಲ ಎಂದು ಸರ್ಕಾರ ಹೇಳಿದೆ. ಪರಿಸ್ಥಿತಿ ಹೀಗಿರುವಲ್ಲಿ, ಈ ಹಿಂದೆ ಸದರಿ ಯೋಜನೆಯ ಅನುಷ್ಠಾನ ಪ್ರಶ್ನಿಸಿ, ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಅರ್ಜಿ ಸಲ್ಲಿಸಿ, ನ್ಯಾಯಾಧೀಕರಣದಿಂದ ತಿರಸ್ಕೃತಗೊಂಡ ಅರ್ಜಿದಾರ ಎನ್. ಸೋಮಶೇಖರ್ ಎಂಬುವವರು ಮಾಧ್ಯಮಗಳಲ್ಲಿ ವಿನಾ ಕಾರಣ ಸುಳ್ಳು ಸುದ್ದಿ ನೀಡುತ್ತಿದ್ದಾರೆ ಎಂದು ಭದ್ರ ಮೇಲ್ಡಂಡೆ ಯೋಜನೆ ಮುಖ್ಯ ಎಂಜಿನಿಯರ್ ತಿಳಿಸಿದ್ದಾರೆ.ಯೋಜನೆ ಸದುದ್ದೇಶ ಹೊಂದಿದ್ದು, ಇದರ ಬಗ್ಗೆ ನಡೆಯುತ್ತಿರುವ ಅಪಪ್ರಚಾರಗಳಿಗೆ ಜನ ಕಿವಿಗೊಡಬಾರದು ಎಂದು ಸರ್ಕಾರ ಸಾರ್ವಜನಿಕರಿಗೆ ಮನವಿ ಮಾಡಿದೆ.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT