ಜಿಲ್ಲಾ ಸುದ್ದಿ

ಬಸ್- ಕ್ರೂಸರ್ ಡಿಕ್ಕಿ, ನಾಲ್ವರ ಸಾವು, ಐವರಿಗೆ ಗಾಯ

Shilpa D

ವಿಜಯಪುರ: ಕೆಎಸ್​ಆರ್​ಟಿಸಿ ಬಸ್ ಮತ್ತು ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. ಘಟನೆಯಲ್ಲಿ ಐದಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗ್ಗೆ 6.30ರ ಸುಮಾರಿಗೆ ಘಟನೆ ಸಂಭವಿಸಿದ್ದು, ಮೃತಪಟ್ಟವರಲ್ಲಿ ಓರ್ವ ಮಹಿಳೆ, ಉಳಿದವರು ಪುರುಷರಾಗಿದ್ದಾರೆ. ಕ್ರೂಸರ್​ನಲ್ಲಿರುವವರೇ ಸಾವನ್ನಪ್ಪಿದ್ದಾರೆ.  ವಿಜಯಪುರದಿಂದ ಹುಬ್ಬಳ್ಳಿಯ ಕಡೆಗೆ ಹೋಗುತ್ತಿತ್ತು. ಬಸ್ ಹುಬ್ಬಳ್ಳಿಯಿಂದ ವಿಜಯಪುರಕ್ಕೆ ಬರುತ್ತಿತ್ತು ಎಂದು ಹೇಳಲಾಗಿದೆ.

ವಿಜಯಾಪುರದ ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

SCROLL FOR NEXT