ಸಿಎಂ ಸಿದ್ದರಾಮಯ್ಯ 
ಜಿಲ್ಲಾ ಸುದ್ದಿ

ಸಾಮರಸ್ಯದಿಂದ ಬದುಕಿದರೆ ಮಾತ್ರ ಅಭಿವೃದ್ಧಿ ಸಾಧ್ಯ

ರಾಜ್ಯದಲ್ಲಿ ಕೋಮುವಾದಿ ಶಕ್ತಿಗಳು ಸಾಮರಸ್ಯ ಕದಡುವ ಪ್ರಯತ್ನ ನಡೆಸುತ್ತಿವೆ. ಅಂತಹ ಶಕ್ತಿಗಳನ್ನು ಹತ್ತಿಕ್ಕಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ...

ಬೆಂಗಳೂರು: ರಾಜ್ಯದಲ್ಲಿ ಕೋಮುವಾದಿ ಶಕ್ತಿಗಳು ಸಾಮರಸ್ಯ ಕದಡುವ ಪ್ರಯತ್ನ ನಡೆಸುತ್ತಿವೆ. ಅಂತಹ ಶಕ್ತಿಗಳನ್ನು ಹತ್ತಿಕ್ಕಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ವಿಧಾನಸೌಧದಲ್ಲಿ ಏರ್ಪಡಿಸಿದ್ದ ಧಾರ್ಮಿಕ, ಭಾಷಾ ಅಲ್ಪಸಂಖ್ಯಾತರ ಹಕ್ಕು ದಿನಾಚರಣೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರು ಆತಂಕ ಭಯದಿಂದ ಜೀವನ ನಡೆಸಬೇಕಿಲ್ಲ, ನಿರಾತಂಕ ವಾಗಿ ಜೀವನ ನಡೆಸಬಹುದು ಎಂದರು. ಸಮಾಜದ ಒಳಿತಿನ ಹಿತದೃಷ್ಠಿಯಿಂದ ಬಹು ಸಂಖ್ಯಾತರು, ಮತ್ತು ಅಲ್ಪ ಸಂಖ್ಯಾತರು, ಒಗ್ಗಟ್ಟಾಗಿ ಜೀವನ ನಡೆಸಿದಾಗ ದೇಶದ ಅಭಿವೃದ್ಧಿ ಸಾಧ್ಯ ಎಂದ ಅವರು, ಸಂವಿಧಾನದಲ್ಲಿ ಅಲ್ಪಸಂಖ್ಯಾತರಿಗೆ ರಕ್ಷಣೆ ಒದಗಿಸಿರುವಂತೆ ಎಲ್ಲ ಸರ್ಕಾರಗಳು ಈ ಸಮುದಾಯಗಳಿಗೆ ರಕ್ಷಣೆ ಒದಗಿಸುವುದು ಕರ್ತವ್ಯ ಎಂದರು.

ಸಚಿವ ಡಾ. ಖಮರುಲ್ ಇಸ್ಲಾಂ ಮಾತನಾಡಿ, ಅಲ್ಪಸಂಖ್ಯಾತರ ಆಯೋಗಕ್ಕೆ ನ್ಯಾಯಾಂಗ ಅಧಿಕಾರ ನೀಡಲು ಚಿಂತನೆ ನಡೆಸಲಾಗುತ್ತಿದೆ. ಮುಂದಿನ ಅಧಿವೇಶನದಲ್ಲಿ ಚರ್ಚೆಗೆ ಬರಲಿದ್ದು, ಶೀಘ್ರದಲ್ಲೇ ಆಯೋಗಕ್ಕೆ ನ್ಯಾಯಾಂಗ ಅಧಿಕಾರ ಸಿಗಲಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT